AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಾಗ್ತಿದೆ ಪಶ್ಚಿಮ ಬಂಗಾಳದಲ್ಲಿ?-ಬಿರ್ಭೂಮ್​ ಹಿಂಸಾಚಾರದ ಭೀಕರತೆಯ ಬೆನ್ನಲ್ಲೇ ಇಬ್ಬರು ಟಿಎಂಸಿ ನಾಯಕರ ಮೇಲೆ ಗಂಭೀರ ಸ್ವರೂಪದ ಹಲ್ಲೆ

ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸ್ಥಳೀಯ ಟಿಎಂಸಿ ಮುಖಂಡನೊಬ್ಬನ ಮೇಲೆ ಗುಂಡಿನ ದಾಳಿಯಾಗಿದ್ದು, ಅವರ ಸ್ಥಿತಿ ಕೂಡ ತೀವ್ರ ಗಂಭೀರವಾಗಿದೆ. ಗಾಯಾಳುವನ್ನು ಸಹದೇವ್​ ಮಂಡಲ್​ ಎಂದು ಗುರುತಿಸಲಾಗಿದೆ.

ಏನಾಗ್ತಿದೆ ಪಶ್ಚಿಮ ಬಂಗಾಳದಲ್ಲಿ?-ಬಿರ್ಭೂಮ್​ ಹಿಂಸಾಚಾರದ ಭೀಕರತೆಯ ಬೆನ್ನಲ್ಲೇ ಇಬ್ಬರು ಟಿಎಂಸಿ ನಾಯಕರ ಮೇಲೆ ಗಂಭೀರ ಸ್ವರೂಪದ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Mar 24, 2022 | 10:08 AM

Share

ಪಶ್ಚಿಮ ಬಂಗಾಳದಲ್ಲಿ ಬಿರ್ಭೂಮ್​​ನಲ್ಲಿ ನಡೆದ ಹಿಂಸಾಚಾರ, 8 ಮಂದಿ ಸಜೀವ ದಹನ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅದರ ಬಿಸಿ ಆರುವ ಮುನ್ನವೇ ಇದೀಗ ಇಬ್ಬರು ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರ ಹತ್ಯೆ ನಡೆದಿದೆ. ಇವೆರಡೂ ಪ್ರತ್ಯೇಕ ಪ್ರಕರಣಗಳಾಗಿವೆ. ಕಳೆದ ಕೆಲವು ದಿನಗಳ ಹಿಂದೆ ಬರೋಸಾಲ್​ ಗ್ರಾಪ ಪಂಚಾಯಿತಿ ಉಪಾಧ್ಯಕ್ಷ ಭಡು ಶೇಖ್​ ಎಂಬುವರ ಹತ್ಯೆಯಾಗಿತ್ತು. ಇವರೂ ಕೂಡ ಟಿಎಂಸಿ ಮುಖಂಡನೇ ಆಗಿದ್ದರು. ಅವರ ಹತ್ಯೆ ಬೆನ್ನಲ್ಲೇ ಬಿರ್ಭೂಮ್​​ನಲ್ಲಿ ಅವರ ಬೆಂಬಲಿಗರು ದಾಂಧಲೆ ಎಬ್ಬಿಸಿ, ಸಿಕ್ಕಸಿಕ್ಕ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಪ್ರಕರಣವನ್ನು ಕೊಲ್ಕತ್ತ ಹೈಕೋರ್ಟ್​ ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಯಾವುದೇ ಸಾಕ್ಷಿ ನಾಶಕ್ಕೆ ಆಸ್ಪದವಾಗದಂತೆ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಬಿರ್ಭೂಮ್​ ಸಹೀವದಹನದ ಸುದ್ದಿಯೇ ಇನ್ನೂ ಚರ್ಚೆಯಲ್ಲಿದೆ. ಅದರ ಬಿಸಿಯೇ ಇನ್ನೂ ಆರಿಲ್ಲ. ಹೀಗಿರುವಾಗ ಹೂಗ್ಲಿಯ ತಾರಕೇಶ್ವರದ ನೂತನ ಕೌನ್ಸಿಲರ್​, ಟಿಎಂಸಿ ನಾಯಕಿ ರೂಪಾ ಸರ್ಕಾರ್​​ ಮೇಲೆ ದಾಳಿಯಾಗಿದೆ. ಕಾರಿನ ಮೂಲಕ ಅವರಿಗೆ ಡಿಕ್ಕಿ ಹೊಡೆಸಲಾಗಿದ್ದು, ಪರಿಸ್ಥಿತಿ ತುಂಬ ಗಂಭೀರವಾಗಿದೆ. ಬುಧವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಸದ್ಯ ರೂಪಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ರಾತ್ರಿ ರೂಪಾ ತಮ್ಮ ಸ್ಕೂಟರ್​ನಲ್ಲಿ ಮನೆಗೆ ಬರುತ್ತಿದ್ದರು. ಈ ವೇಳೆ ಮಾರುತಿ ವ್ಯಾನ್​​ ಬಂದು ಅವರ ಬೈಕ್​​ನ ಹಿಂಬದಿಗೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ರೂಪಾ ಇದು ತನ್ನ ಹತ್ಯೆ ಯತ್ನ ಎಂದೇ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಹಾಗೇ ಇನ್ನೊಂದು ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸ್ಥಳೀಯ ಟಿಎಂಸಿ ಮುಖಂಡನೊಬ್ಬನ ಮೇಲೆ ಗುಂಡಿನ ದಾಳಿಯಾಗಿದ್ದು, ಅವರ ಸ್ಥಿತಿ ಕೂಡ ತೀವ್ರ ಗಂಭೀರವಾಗಿದೆ. ಗಾಯಾಳುವನ್ನು ಸಹದೇವ್​ ಮಂಡಲ್​ ಎಂದು ಗುರುತಿಸಲಾಗಿದ್ದು, ಸ್ಥಳೀಯ ಟಿಎಂಸಿ ಮುಖಂಡ. ಇವರು ಬೋಗುಲಾ ಗ್ರಾಮ ಪಂಚಾಯಿತಿ ನಂ.2ರ ಸದಸ್ಯೆಯಾದ ಅನಿಮಾ ಮಂಡಲ್​ ಪತಿ. ಗುಂಡೇಟಿನಿಂದ ಗಾಯಗೊಂಡು ಬಿದ್ದಿದ್ದ ಸಹದೇವ್​​ರನ್ನು ಸ್ಥಳೀಯರೇ ರಕ್ಷಣೆ ಮಾಡಿ, ಬಗುಲಾ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಕೃಷ್ಣನಗರದಲ್ಲಿರುವ ಶಕ್ತಿ ನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾರ್ಚ್​ 22ರ ಮಧ್ಯರಾತ್ರಿ ನಡೆದ ಬಿರ್ಭೂಮ್​ ಹಿಂಸಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರೂ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಇಬ್ಬರು ಮಕ್ಕಳೂ ಬೆಂಕಿಯಲ್ಲಿ ಉರಿದು ದಹನಗೊಂಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಂತೂ ಈ ಘಟನೆಯಲ್ಲಿ ಪ್ರತಿಪಕ್ಷಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರ ಪ್ರಕಾರ ಇದು ರಾಜಕೀಯ ಕಾರಣಕ್ಕೆ ನಡೆದ ಹಿಂಸಾಚಾರವಲ್ಲ. ಸದ್ಯ ಪ್ರಕರಣದ ತನಿಖೆಯನ್ನು ಎಲ್ಲ ರೀತಿಯ ಆಯಾಮಗಳಿಂದಲೂ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಟ್ಟ ಹತ್ತುತ್ತಿದ್ದ ಪಾದಯಾತ್ರಿಗಳ ಮೇಲೆರಗಿದ ದೈತ್ಯ ಹಾವು; ಮುಂದೆ ಆಗಿದ್ದೇನು..! ಇಲ್ಲಿದೆ ನೋಡಿ ವೈರಲ್ ವಿಡಿಯೋ

Published On - 9:41 am, Thu, 24 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್