Train Accident: ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ; ಆರು ಪ್ರಯಾಣಿಕರು ದುರ್ಮರಣ

ವಿಜಯನಗರಂ ಜಿಲ್ಲೆಯ ಕೊತ್ತವಲಸ ಮಂಡಲಂನಲ್ಲಿ ಎರಡು ರೈಲುಗಳ ಮಧ್ಯೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 29, 2023 | 10:13 PM

ಆಂಧ್ರಪ್ರದೇಶ: ರಾಜ್ಯದ ವಿಜಯನಗರಂ(Vizianagaram) ಜಿಲ್ಲೆಯ ಕೊತ್ತವಲಸ ಮಂಡಲಂನಲ್ಲಿ ಇಂದು(ಅ.29) ಸಂಜೆ ಎರಡು ರೈಲುಗಳ (Trains) ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. 40 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಅಗ್ನಿಶಾಮಕ ದಳ, ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.

ಮೂಲಗಳ ಪ್ರಕಾರ, ರೈಲು ವಿಶಾಖಪಟ್ಟಣದಿಂದ ರಾಯಗಡಕ್ಕೆ ಹೋಗುವ ಪ್ಯಾಸೆಂಜರ್ ರೈಲು(08532)  ಹಿಂಬದಿಯಿಂದ ಪಲಾಸ ಪ್ಯಾಸೆಂಜರ್(08504) ರೈಲಿಗೆ ಡಿಕ್ಕಿ ಹೊಡೆದು ಎರಡು ಬೋಗಿಗಳು ಹಳಿತಪ್ಪಿದ್ದು, ಅಪಘಾತದ ನಂತರ, ಪಲಾಸ ಪ್ಯಾಸೆಂಜರ್‌ನ ಒಂದು ಕೋಚ್ ಮುಖ್ಯ ಮಾರ್ಗಕ್ಕೆ ಹಾರಿದ್ದು, ಅದೇ ಮಾರ್ಗದಲ್ಲಿ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.  ಯಾವುದೇ ಪ್ರಾಣಹಾನಿ ಮತ್ತು ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.

ಇದನ್ನೂ ಓದಿ:ತಮಿಳುನಾಡು: ರೈಲ್ವೆ ಹಳಿ ದಾಟುವಾಗ ರೈಲು ಹರಿದು ಮೂವರು ಮಕ್ಕಳು ಸಾವು

ಇನ್ನು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶಿಸಿದ್ದು, ವಿಜಯನಗರಂ ಸಮೀಪ ಇರುವ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ರವಾನಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದರ ಜೊತೆಗೆ ಗಾಯಗೊಂಡ ವ್ಯಕ್ತಿಗಳಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಆರೈಕೆಯನ್ನು ನೀಡಲು ಹತ್ತಿರದ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೆಲ್ಪ್‌ಲೈನ್‌ ನಂಬರ್ ಬಿಡುಗಡೆ ಮಾಡಿದ ರೈಲ್ವೆ ಇಲಾಖೆ

ಹೆಲ್ಪ್‌ಲೈನ್‌ ಸಂಖ್ಯೆ-08912746330, 08912744619 ಹೆಲ್ಪ್‌ಲೈನ್‌ ಸಂಖ್ಯೆ-8106053051; 8106053052 ಹೆಲ್ಪ್‌ಲೈನ್‌ ಸಂಖ್ಯೆ-8500041670; 8500041671

ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದ ಹೆಲ್ಪಲೈನ್​​ ಸಂಖ್ಯೆ 83003; 83004; 83005; 83006

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Sun, 29 October 23

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ