AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಗಲಲ್ಲೇ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು; ಮಾಲೀಕನಿಗೆ ಗನ್​ ತೋರಿಸಿ ಲೂಟಿ

ಹಗಲಲ್ಲೇ ನಡೆದ ಈ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋಗಳು ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

Video: ಹಗಲಲ್ಲೇ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು; ಮಾಲೀಕನಿಗೆ ಗನ್​ ತೋರಿಸಿ ಲೂಟಿ
ದೆಹಲಿ ಅಂಗಡಿ ಲೂಟಿ ಮಾಡಿದ ದೃಶ್ಯ
TV9 Web
| Edited By: |

Updated on: Sep 06, 2021 | 2:57 PM

Share

ಹಾಡಹಗಲಲ್ಲೇ ಹಾರ್ಡ್​ವೇರ್​ ಸಾಮಗ್ರಿಗಳ ಅಂಗಡಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಅಂಗಡಿ ಮಾಲೀಕನಿಗೆ ಪಿಸ್ತೂಲ್​ ತೋರಿಸಿ ಹೆದರಿಸಿ, ಅಲ್ಲಿದ್ದ ಹಣ, ಬೆಲೆಬಾಳುವ ವಸ್ತುಗಳನ್ನೆಲ್ಲ ದೋಚಿದ್ದಾರೆ. ಮೂವರು ಮುಸುಕು ಧಾರಿಗಳು ಪಿಸ್ತೂಲ್​ ಹಿಡಿದು ಅಂಗಡಿಗೆ ನುಗ್ಗಿ, ಮಾಲೀಕ ಮತ್ತು ಅಲ್ಲಿದ್ದ ಉಳಿದ ಗ್ರಾಹಕರಿಗೆ ಗುಂಡು ಹೊಡೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ. ಅವರ ಕೃತ್ಯವೆಲ್ಲ ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಘಟನೆ ನಡೆದಿದ್ದು ದೆಹಲಿಯ ನರೇಲಾ ಎಂಬಲ್ಲಿ. ಯಾರ ಜೀವಕ್ಕೂ ಹಾನಿ ಮಾಡದೆ ಇದ್ದರೂ, ಗುಂಡು ಹೊಡೆಯುವುದಾಗಿ ಹೆದರಿಸಿದ್ದಾರೆ. ಮಾಲೀಕನ ಎದುರೇ ಹಣ ಇಟ್ಟಿದ್ದ ಡ್ರಾಯರ್ ತೆಗೆದು ಅಷ್ಟೂ ದುಡ್ಡನ್ನೂ ದೋಚಿದ್ದಾರೆ. ಪೊಲೀಸರು ಪ್ರಕರನ ದಾಖಲಿಸಿಕೊಂಡಿದ್ದು, ಆ ದುಷ್ಕರ್ಮಿಗಳು ಯಾರೆಂದು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. 

ವಿಡಿಯೋದಲ್ಲಿ ಏನಿದೆ? ಘಟನೆಗೆ ಸಂಬಂಧಪಟ್ಟ ವಿಡಿಯೋಗಳು ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೈಕ್​ನಲ್ಲಿ ಬಂದ ಮೂವರು ಮುಸುಕುಧಾರಿಗಳು ಸಂಜೆ ಸುಮಾರು 7.50ರ ಹೊತ್ತಿಗೆ ದೆಹಲಿಯ ಅಂಗಡಿಗೆ ನುಗ್ಗುತ್ತಾರೆ. ಆದರೆ ಮಾಲೀಕನಿಗೆ ಅದು ಮೊದಲು ಗೊತ್ತಾಗಲಿಲ್ಲ. ಅವರು ಕ್ಯಾಶಿಯರ್​ ಜಾಗದಲ್ಲಿ ನಿಂತು ಫೋನ್​​ನಲ್ಲಿ ಮಾತನಾಡುತ್ತ ಇರುತ್ತಾರೆ. ಒಳಗೆ ಬಂದ ತಕ್ಷಣ ಉಳಿದ ಗ್ರಾಹಕರು, ಅಂಗಡಿ ಸಿಬ್ಬಂದಿಗೆ ದುಷ್ಕರ್ಮಿಗಳು ಹೆದರಿಸುತ್ತಾರೆ. ಅವರಲ್ಲೊಬ್ಬ ಹಿರಿಯ ನಾಗರಿಕನಿಗೆ ಹೊಡೆಯುತ್ತಾರೆ. ಪಿಸ್ತೂಲ್​ ತೋರಿಸಿ ಗುಂಡು ಹಾರಿಸುವ ಬೆದರಿಕೆ ಒಡ್ಡುತ್ತಾರೆ. ನಂತರ ಆ ಮಾಲೀಕ ನಿಂತಲ್ಲಿಗೆ ಬಂದು ಡ್ರಾಯರ್​ನಿಂದ ಅಷ್ಟೂ ಹಣ ದೋಚುತ್ತಾರೆ. ಮಾಲೀಕ ಪ್ರತಿರೋಧ ಒಡ್ಡಿದಾಗ ಹೆದರಿಸುವ ಸಂಬಂಧ ಗಾಳಿಯಲ್ಲಿ ಗುಂಡು ಹೊಡೆಯುತ್ತಾರೆ. ಮಾಲೀಕ ಪ್ರತಿರೋಧ ಒಡ್ಡಿದಾಗ ಅವರ ಕಾಲಿಗೆ ಕೂಡ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಂಗಡಿಯೊಳಗೆ ಲೂಟಿಯಾಗುತ್ತಿದ್ದರೆ ಹೊರಗೆ ನಿಂತ ಕೆಲವರು ಅದನ್ನು ವಿಡಿಯೋ ಮಾಡಿದ್ದಾರೆ. ನಂತರ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಹೊಸ ಜಾಮೀನು ಅರ್ಜಿ ಸಲ್ಲಿಸಿದ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್

ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ

Follow Us
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್