AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್