AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್