AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ