AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು