AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

Follow Us
KUSHAL V
KUSHAL V
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ