AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

Follow Us
KUSHAL V
KUSHAL V
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ