AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ […]

ನೌಕಾಪಡೆಯಲ್ಲಿ ನಾರಿ ಶಕ್ತಿಯ ಪತಾಕೆ: ಯುದ್ಧನೌಕೆಗಳಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ
KUSHAL V
|

Updated on:Sep 21, 2020 | 7:26 PM

Share

ದೆಹಲಿ: ಭಾರತೀಯ ನೌಕಾಪಡೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಸಿಬ್ಬಂದಿ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸಲಿದ್ದಾರೆ. ಹೌದು, ಸಬ್​ ಲೆಫ್ಟಿನೆಂಟ್​ ಕುಮುದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​ ರಿತಿ ಸಿಂಗ್​ ಎಂಬ ಇಬ್ಬರು ಮಹಿಳಾ ಆಫೀಸರ್​ಗಳು ಇದೀಗ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳಲಿದ್ದಾರೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ. ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​ ನೌಕಾಪಡೆಯ ಹೆಲಿಕಾಪ್ಟರ್​ ವಿಭಾಗದಲ್ಲಿ ಅಬ್​ಸರ್ವರ್​ಗಳಾಗಿ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಕರ್ತವ್ಯ ವ್ಯಾಪ್ತಿಯ ಅಂಗವಾಗಿ ಯುದ್ಧನೌಕೆಗಳ ಮೇಲೆ ನಿಯೋಜನೆಗೊಳ್ಳುವ ಹೆಲಿಕಾಪ್ಟರ್​ಗಳಲ್ಲಿ ಸಹ ಸೇವೆ ಸಲ್ಲಿಸಲಿದ್ದಾರೆ. ಈ ಹಿಂದೆ ಮಹಿಳಾ ಸಿಬ್ಬಂದಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ಇರಲಿಲ್ಲ. ಆದರೆ, ಈ ಇಬ್ಬರು ಮಹಿಳಾ ಸಿಬ್ಬಂದಿಗೆ ನೌಕಾಪಡೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಯುದ್ಧನೌಕೆಗಳ ಮೇಲೆ ಕರ್ತವ್ಯ ನಿರ್ವಹಿಸುವ ಅವಕಾಶ ದೊರೆತಿದೆ.

ಇಬ್ಬರು ಮಹಿಳಾ ಆಫೀಸರ್​ಗಳು ಇತ್ತೀಚೆಗಷ್ಟೇ ಅಬ್​ಸರ್ವರ್​ ವಿಭಾಗದಲ್ಲಿ ತರಬೇತಿ ಪಡೆದು ತಮ್ಮ ಕ್ಲಾಸ್​ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಅವರ ಸಹಪಾಠಿಗಳಿಗೆ ಇಂದು ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ತೇರ್ಗಡೆ ಹೊಂದಿದ ಎಲ್ಲಾ ಆಫೀಸರ್​ಗಳಿಗೆ ರೆಕ್ಕೆ ಚಿಹ್ನೆಯನ್ನು (Wings) ಪ್ರದಾನ ಮಾಡಲಾಯಿತು.

Published On - 7:12 pm, Mon, 21 September 20

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!