AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ..! ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು

ಪಿಸ್ತಾ, ಈ ಡ್ರೈ ಪ್ರೂಟ್‌ನ ಹೆಸರನ್ನು ಬಹುತೇಕರು ಕೇಳಿಯೇ ಇರುತ್ತೀರಾ. ಇದರ ಪ್ರಯೋಜನ ಮಾತ್ರ ಅಷ್ಟಿಷ್ಟಲ್ಲ. ಪಿಸ್ತಾ ಬೀಜಗಳು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ಸಹ ಬಹಳ ಒಳ್ಳೆಯದು. ರುಚಿಯಾದ ಒಣಬೀಜವಾದ ಈ ಪಿಸ್ತಾದಲ್ಲಿ ಭರ್ಜರಿ ಪೋಷಕಾಂಶಗಳಿವೆ. ಇಷ್ಟೆಲ್ಲಾ ಪ್ರಯೋಜನ ಹೊಂದಿರುವ ಪಿಸ್ತಾದ ಸಿಪ್ಪೆ ನುಂಗಿ ಎರಡು ವರ್ಷದ ಬಾಲಕ ದುರಂತ ಸಾವು ಕಂಡಿದೆ.

ಅಯ್ಯೋ ವಿಧಿಯೇ..! ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು
ಅನಸ್ ಮೃತ ಬಾಲಕ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 13, 2025 | 6:13 PM

Share

ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಮೃತಪಟ್ಟಿದೆ.

ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ ಹಾಗೂ ಮೆಹರೂಫ ಎಂಬುವರ ಮಗ ಅನಸ್ ಶನಿವಾರ ಪಿಸ್ತಾದ ಸಿಪ್ಪೆ ನುಂಗಿದ್ದ. ಕೂಡಲೇ ಸಿಪ್ಪೆಯ ಒಂದು ಭಾಗ ಹೊರ ತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವಿನ ತಪಾಸಣೆ ಮಾಡಿದ ವೈದ್ಯರು, ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದು ಹೇಳಿದ್ದರು. ಆದ್ರೆ, ಮರುದಿನ ಅಂದರೆ ನಿನ್ನೆ ಭಾನುವಾರ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದ ಭಯಗೊಂಡ ಪೋಷಕರು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.

ಇದನ್ನೂ ಓದಿ: 4 ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಹಾರಿದ ಮಹಿಳೆ: ಕಾರಣ ಕೇಳಿದ್ರೆ ಕರುಳು ಚುರ್ ಅನ್ನುತ್ತೆ!

ಬಾಟಲಿಗಳ ಮುಚ್ಚಳ, ನಾಣ್ಯಗಳನ್ನು ನುಂಗಿ ಮಕ್ಕಳು ಮೃತಪಟ್ಟಿರುವ ಉದಾಹರಣೆಗಳು ಇವೆ. ನವಜಾತ ಶಿಶುವಿನಿಂದ ಐದಾರು ವರ್ಷದವರೆಗೆ ಮಕ್ಕಳ ಲಾಲನೆ ಪಾಲನೆ ಅತ್ಯಂತ ನಾಜೂಕಾಗಿರುತ್ತೆ. ಆಗಾಗಿ  ಚಿಕ್ಕ ಮಕ್ಕಳನ್ನು ಪೋಷಕರು ಭಾರೀ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು.  ನುಂಗುವಂತ ವಸ್ತು, ಆಹಾರ ಪದಾರ್ಥವಾಗಲಿ ಮಕ್ಕಳ ಮುಂದೆ ಇಡಬಾರದರು.

ಮಕ್ಕಳಿಗೆ ಯಾವುದು ಏನು ಅಂತ ತಿಳಿಯಲ್ಲ. ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಹಾಕಿಕೊಳ್ಳುತ್ತವೆ. ಹಲ್ಲು ಮಾಡುವ ಸಂದರ್ಭದಲ್ಲಿ ವಸಡು ಚುಟು ಚುಟು ಎನ್ನುತ್ತಿರುತ್ತೆ. ಹೀಗಾಗಿ ಮಕ್ಕಳು ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಇಟ್ಟುಕೊಳ್ಳುತ್ತವೆ. ಇದರಿಂದ ಪೋಷಕರು ನಿರ್ಲಕ್ಷ್ಯ ಮಾಡದೇ ತಮ್ಮ ತಮ್ಮ ಮಕ್ಕಳ ಬಗ್ಗೆ ಫುಲ್​ ಕೇರ್​ ತೆಗೆದುಕೊಳ್ಳಬೇಕು. ಒಂದು ಸಲ ಮೈಮರೆತರೇ ಅನಾಹುತ ಸಂಭವಿಸುತ್ತವೆ. ಈ ರೀತಿಯ ಅನಾಹುತಗಳು ಆಗದಂತೆ ನೋಡಿಕೊಳ್ಳುವುದು ಒಳಿತು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?