AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ..! ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು

ಪಿಸ್ತಾ, ಈ ಡ್ರೈ ಪ್ರೂಟ್‌ನ ಹೆಸರನ್ನು ಬಹುತೇಕರು ಕೇಳಿಯೇ ಇರುತ್ತೀರಾ. ಇದರ ಪ್ರಯೋಜನ ಮಾತ್ರ ಅಷ್ಟಿಷ್ಟಲ್ಲ. ಪಿಸ್ತಾ ಬೀಜಗಳು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ಸಹ ಬಹಳ ಒಳ್ಳೆಯದು. ರುಚಿಯಾದ ಒಣಬೀಜವಾದ ಈ ಪಿಸ್ತಾದಲ್ಲಿ ಭರ್ಜರಿ ಪೋಷಕಾಂಶಗಳಿವೆ. ಇಷ್ಟೆಲ್ಲಾ ಪ್ರಯೋಜನ ಹೊಂದಿರುವ ಪಿಸ್ತಾದ ಸಿಪ್ಪೆ ನುಂಗಿ ಎರಡು ವರ್ಷದ ಬಾಲಕ ದುರಂತ ಸಾವು ಕಂಡಿದೆ.

ಅಯ್ಯೋ ವಿಧಿಯೇ..! ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು
ಅನಸ್ ಮೃತ ಬಾಲಕ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 13, 2025 | 6:13 PM

Share

ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಮೃತಪಟ್ಟಿದೆ.

ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ ಹಾಗೂ ಮೆಹರೂಫ ಎಂಬುವರ ಮಗ ಅನಸ್ ಶನಿವಾರ ಪಿಸ್ತಾದ ಸಿಪ್ಪೆ ನುಂಗಿದ್ದ. ಕೂಡಲೇ ಸಿಪ್ಪೆಯ ಒಂದು ಭಾಗ ಹೊರ ತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವಿನ ತಪಾಸಣೆ ಮಾಡಿದ ವೈದ್ಯರು, ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದು ಹೇಳಿದ್ದರು. ಆದ್ರೆ, ಮರುದಿನ ಅಂದರೆ ನಿನ್ನೆ ಭಾನುವಾರ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದ ಭಯಗೊಂಡ ಪೋಷಕರು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.

ಇದನ್ನೂ ಓದಿ: 4 ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಹಾರಿದ ಮಹಿಳೆ: ಕಾರಣ ಕೇಳಿದ್ರೆ ಕರುಳು ಚುರ್ ಅನ್ನುತ್ತೆ!

ಬಾಟಲಿಗಳ ಮುಚ್ಚಳ, ನಾಣ್ಯಗಳನ್ನು ನುಂಗಿ ಮಕ್ಕಳು ಮೃತಪಟ್ಟಿರುವ ಉದಾಹರಣೆಗಳು ಇವೆ. ನವಜಾತ ಶಿಶುವಿನಿಂದ ಐದಾರು ವರ್ಷದವರೆಗೆ ಮಕ್ಕಳ ಲಾಲನೆ ಪಾಲನೆ ಅತ್ಯಂತ ನಾಜೂಕಾಗಿರುತ್ತೆ. ಆಗಾಗಿ  ಚಿಕ್ಕ ಮಕ್ಕಳನ್ನು ಪೋಷಕರು ಭಾರೀ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು.  ನುಂಗುವಂತ ವಸ್ತು, ಆಹಾರ ಪದಾರ್ಥವಾಗಲಿ ಮಕ್ಕಳ ಮುಂದೆ ಇಡಬಾರದರು.

ಮಕ್ಕಳಿಗೆ ಯಾವುದು ಏನು ಅಂತ ತಿಳಿಯಲ್ಲ. ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಹಾಕಿಕೊಳ್ಳುತ್ತವೆ. ಹಲ್ಲು ಮಾಡುವ ಸಂದರ್ಭದಲ್ಲಿ ವಸಡು ಚುಟು ಚುಟು ಎನ್ನುತ್ತಿರುತ್ತೆ. ಹೀಗಾಗಿ ಮಕ್ಕಳು ಕೈಗೆ ಸಿಕ್ಕಿದ್ದನ್ನು ಮೊದಲು ಬಾಯಿಗೆ ಇಟ್ಟುಕೊಳ್ಳುತ್ತವೆ. ಇದರಿಂದ ಪೋಷಕರು ನಿರ್ಲಕ್ಷ್ಯ ಮಾಡದೇ ತಮ್ಮ ತಮ್ಮ ಮಕ್ಕಳ ಬಗ್ಗೆ ಫುಲ್​ ಕೇರ್​ ತೆಗೆದುಕೊಳ್ಳಬೇಕು. ಒಂದು ಸಲ ಮೈಮರೆತರೇ ಅನಾಹುತ ಸಂಭವಿಸುತ್ತವೆ. ಈ ರೀತಿಯ ಅನಾಹುತಗಳು ಆಗದಂತೆ ನೋಡಿಕೊಳ್ಳುವುದು ಒಳಿತು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ