AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಖುಷಿಯಲ್ಲಿದ್ದ 2ವರ್ಷದ ಹೆಣ್ಣುಮಗು ಅಡುಗೆ ಮನೆಗೆ ಹೋಗಿ ಸಾವು; ಪ್ರಾಣ ತೆಗೆದ ಬಿಸಿ ಸಾಂಬಾರ್​

ಆಕೆಯ ಪಾಲಕರು ಬಂದ ಅತಿಥಿಗಳಿಗೆ ಸತ್ಕಾರದಲ್ಲಿ ತೊಡಗಿದ್ದರು. ಅದ್ಯಾವ ಮಾಯದಲ್ಲಿ ತೇಜಸ್ವಿ ಅಡುಗೆ ಮನೆಗೆ ಹೋದಳೋ, ಯಾರೂ ನೋಡಲಿಲ್ಲ. ಆಗತಾನೇ ಸಾಂಬಾರನ್ನು ಕುದಿಸಿ, ಅಲ್ಲಿಯೇ ಇಡಲಾಗಿತ್ತು.

ಹುಟ್ಟುಹಬ್ಬದ ಖುಷಿಯಲ್ಲಿದ್ದ 2ವರ್ಷದ  ಹೆಣ್ಣುಮಗು ಅಡುಗೆ ಮನೆಗೆ ಹೋಗಿ ಸಾವು; ಪ್ರಾಣ ತೆಗೆದ ಬಿಸಿ ಸಾಂಬಾರ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 15, 2022 | 9:54 AM

Share

ಫೆಬ್ರವರಿ 13 ಆ ಎರಡು ವರ್ಷದ ಪುಟ್ಟ ಮಗುವಿನ ಹುಟ್ಟುಹಬ್ಬ(Birth Day). ಒಳಗೆಲ್ಲ ಭರ್ಜರಿ ತಯಾರಿ ನಡೆಯುತ್ತಿತ್ತು. ಪಾಲಕರು, ಮನೆಯವರೆಲ್ಲ ಸಂಭ್ರಮದಲ್ಲಿ ಸಿದ್ಧತೆ ನಡೆಸುತ್ತಿದ್ದರು. ಈ ಮಗು ಹೊರಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಆದರೆ ಆ ದಿನವೇ ಪುಟ್ಟ ಮಗುವಿನ ಪಾಲಿಗೆ ಕೊನೆಯ ದಿನವಾಯಿತು. ಎರಡನೇ ವರ್ಷದ ಹುಟ್ಟಿದ ಹಬ್ಬದಂತೇ ಹೆಣ್ಣು ಮಗು ಜೀವ ಬಿಟ್ಟಳು. ಅದೂ ಕೂಡ ಬಿಸಿಬಿಸಿ ಸಾರಿನ ಪಾತ್ರೆಯಲ್ಲಿ ಬಿದ್ದು, ದಾರುಣವಾಗಿ ಮೃತಪಟ್ಟಳು.

ಈ ಘಟನೆ ನಡೆದದ್ದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಎಂಬಲ್ಲಿ.  ಹೆಣ್ಣುಮಗುವಿನ ಹೆಸರು ತೇಜಸ್ವಿ. ಈಕೆ ಶಿವ ಮತ್ತು ಭಾನುಮತ್​ ದಂಪತಿಯ ಪುತ್ರಿ. ಫೆ.13ರಂದು ಆಕೆಯ ಹುಟ್ಟಿದ ಹಬ್ಬವಿದ್ದುದರಿಂದ ಸಿಹಿ ಅಡುಗೆ, ಬಗೆಬಗೆಯ ಭಕ್ಷ್ಯಗಳನ್ನು ಮಾಡಲಾಗಿತ್ತು. ಮನೆಗೆ ಅತಿಥಿಗಳೂ ಬಂದಿದ್ದರು. ತೇಜಸ್ವಿ ಮನೆಯ ಹೊರಗೆ ಅಲ್ಲೇ ಕಣ್ಣಿಗೆ ಕಾಣುವ ದೂರದಲ್ಲಿ ಆಟವಾಡಿಕೊಳ್ಳುತ್ತಿದ್ದರೆ, ಅತ್ತ ಆಕೆಯ ಪಾಲಕರು ಬಂದ ಅತಿಥಿಗಳಿಗೆ ಸತ್ಕಾರದಲ್ಲಿ ತೊಡಗಿದ್ದರು. ಅದ್ಯಾವ ಮಾಯದಲ್ಲಿ ತೇಜಸ್ವಿ ಅಡುಗೆ ಮನೆಗೆ ಹೋದಳೋ, ಯಾರೂ ನೋಡಲಿಲ್ಲ. ಆಗತಾನೇ ಸಾಂಬಾರನ್ನು ಕುದಿಸಿ, ಅಲ್ಲಿಯೇ ಇಡಲಾಗಿತ್ತು. ಬಾಲಕಿ ಹೋಗಿ, ಖುರ್ಚಿ ಹತ್ತಲು ಪ್ರಯತ್ನಿಸಿದ್ದಾಳೆ. ಆಯ ತಪ್ಪಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದಿದ್ದಾಳೆ. ಸುಟ್ಟಗಾಯಗಳಿಂದ ನರಳುತ್ತಿದ್ದ ಅವಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬದುಕಿಸಲು ಸಾಧ್ಯವಾಗಲಿಲ್ಲ. ಆಕಸ್ಮಿಕ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Mobile Schools: ಮಾರ್ಚ್ 1ರಿಂದ ಮೊಬೈಲ್ ಶಾಲೆಗಳನ್ನು ಪುನಾರಂಭ ಮಾಡಲು ಬಿಬಿಎಂಪಿ ನಿರ್ಧಾರ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!