AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದ ಖುಷಿಯಲ್ಲಿದ್ದ 2ವರ್ಷದ ಹೆಣ್ಣುಮಗು ಅಡುಗೆ ಮನೆಗೆ ಹೋಗಿ ಸಾವು; ಪ್ರಾಣ ತೆಗೆದ ಬಿಸಿ ಸಾಂಬಾರ್​

ಆಕೆಯ ಪಾಲಕರು ಬಂದ ಅತಿಥಿಗಳಿಗೆ ಸತ್ಕಾರದಲ್ಲಿ ತೊಡಗಿದ್ದರು. ಅದ್ಯಾವ ಮಾಯದಲ್ಲಿ ತೇಜಸ್ವಿ ಅಡುಗೆ ಮನೆಗೆ ಹೋದಳೋ, ಯಾರೂ ನೋಡಲಿಲ್ಲ. ಆಗತಾನೇ ಸಾಂಬಾರನ್ನು ಕುದಿಸಿ, ಅಲ್ಲಿಯೇ ಇಡಲಾಗಿತ್ತು.

ಹುಟ್ಟುಹಬ್ಬದ ಖುಷಿಯಲ್ಲಿದ್ದ 2ವರ್ಷದ  ಹೆಣ್ಣುಮಗು ಅಡುಗೆ ಮನೆಗೆ ಹೋಗಿ ಸಾವು; ಪ್ರಾಣ ತೆಗೆದ ಬಿಸಿ ಸಾಂಬಾರ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 15, 2022 | 9:54 AM

Share

ಫೆಬ್ರವರಿ 13 ಆ ಎರಡು ವರ್ಷದ ಪುಟ್ಟ ಮಗುವಿನ ಹುಟ್ಟುಹಬ್ಬ(Birth Day). ಒಳಗೆಲ್ಲ ಭರ್ಜರಿ ತಯಾರಿ ನಡೆಯುತ್ತಿತ್ತು. ಪಾಲಕರು, ಮನೆಯವರೆಲ್ಲ ಸಂಭ್ರಮದಲ್ಲಿ ಸಿದ್ಧತೆ ನಡೆಸುತ್ತಿದ್ದರು. ಈ ಮಗು ಹೊರಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಆದರೆ ಆ ದಿನವೇ ಪುಟ್ಟ ಮಗುವಿನ ಪಾಲಿಗೆ ಕೊನೆಯ ದಿನವಾಯಿತು. ಎರಡನೇ ವರ್ಷದ ಹುಟ್ಟಿದ ಹಬ್ಬದಂತೇ ಹೆಣ್ಣು ಮಗು ಜೀವ ಬಿಟ್ಟಳು. ಅದೂ ಕೂಡ ಬಿಸಿಬಿಸಿ ಸಾರಿನ ಪಾತ್ರೆಯಲ್ಲಿ ಬಿದ್ದು, ದಾರುಣವಾಗಿ ಮೃತಪಟ್ಟಳು.

ಈ ಘಟನೆ ನಡೆದದ್ದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಎಂಬಲ್ಲಿ.  ಹೆಣ್ಣುಮಗುವಿನ ಹೆಸರು ತೇಜಸ್ವಿ. ಈಕೆ ಶಿವ ಮತ್ತು ಭಾನುಮತ್​ ದಂಪತಿಯ ಪುತ್ರಿ. ಫೆ.13ರಂದು ಆಕೆಯ ಹುಟ್ಟಿದ ಹಬ್ಬವಿದ್ದುದರಿಂದ ಸಿಹಿ ಅಡುಗೆ, ಬಗೆಬಗೆಯ ಭಕ್ಷ್ಯಗಳನ್ನು ಮಾಡಲಾಗಿತ್ತು. ಮನೆಗೆ ಅತಿಥಿಗಳೂ ಬಂದಿದ್ದರು. ತೇಜಸ್ವಿ ಮನೆಯ ಹೊರಗೆ ಅಲ್ಲೇ ಕಣ್ಣಿಗೆ ಕಾಣುವ ದೂರದಲ್ಲಿ ಆಟವಾಡಿಕೊಳ್ಳುತ್ತಿದ್ದರೆ, ಅತ್ತ ಆಕೆಯ ಪಾಲಕರು ಬಂದ ಅತಿಥಿಗಳಿಗೆ ಸತ್ಕಾರದಲ್ಲಿ ತೊಡಗಿದ್ದರು. ಅದ್ಯಾವ ಮಾಯದಲ್ಲಿ ತೇಜಸ್ವಿ ಅಡುಗೆ ಮನೆಗೆ ಹೋದಳೋ, ಯಾರೂ ನೋಡಲಿಲ್ಲ. ಆಗತಾನೇ ಸಾಂಬಾರನ್ನು ಕುದಿಸಿ, ಅಲ್ಲಿಯೇ ಇಡಲಾಗಿತ್ತು. ಬಾಲಕಿ ಹೋಗಿ, ಖುರ್ಚಿ ಹತ್ತಲು ಪ್ರಯತ್ನಿಸಿದ್ದಾಳೆ. ಆಯ ತಪ್ಪಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದಿದ್ದಾಳೆ. ಸುಟ್ಟಗಾಯಗಳಿಂದ ನರಳುತ್ತಿದ್ದ ಅವಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬದುಕಿಸಲು ಸಾಧ್ಯವಾಗಲಿಲ್ಲ. ಆಕಸ್ಮಿಕ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Mobile Schools: ಮಾರ್ಚ್ 1ರಿಂದ ಮೊಬೈಲ್ ಶಾಲೆಗಳನ್ನು ಪುನಾರಂಭ ಮಾಡಲು ಬಿಬಿಎಂಪಿ ನಿರ್ಧಾರ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ