AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ, ಎಚ್ಆರ್ ಮುಖ್ಯಸ್ಥರಿಗೆ 10 ದಿನ ನ್ಯಾಯಾಂಗ ಬಂಧನ

ಕಳೆದ ವಾರ, ದೆಹಲಿ ಹೈಕೋರ್ಟ್ ವೆಬ್‌ಸೈಟ್ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಅವರ ವಿರುದ್ಧದ ಆರೋಪಗಳು ತಕ್ಷಣದ ಪರಿಹಾರವನ್ನು ನೀಡಬಹುದಾದಂತಹ ಸ್ವರೂಪದಲ್ಲಿರಲಿಲ್ಲ ಎಂದು ಹೇಳಿದರು. ಆರೋಪಗಳು ನಿಮಗೆ ತಕ್ಷಣದ ಪರಿಹಾರವನ್ನು ನೀಡುವಂತಹ ಸ್ವರೂಪವನ್ನು ತೋರುತ್ತಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದರು.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ, ಎಚ್ಆರ್ ಮುಖ್ಯಸ್ಥರಿಗೆ 10 ದಿನ ನ್ಯಾಯಾಂಗ ಬಂಧನ
ಪ್ರಬೀರ್ ಪುರಕಾಯಸ್ಥ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 10, 2023 | 8:31 PM

Share

ದೆಹಲಿ ಅಕ್ಟೋಬರ್ 10: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ (NewsClick) ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ (Prabir Purkayastha) ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakraborty) ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಚೀನಾ ಪರ ಪ್ರಚಾರಕ್ಕಾಗಿ ಪೋರ್ಟಲ್‌ಗೆ ಹಣ ಬಂದಿದೆ ಎಂಬ ಆರೋಪದ ಮೇಲೆ ಅಕ್ಟೋಬರ್ 3 ರಂದು ದೆಹಲಿ ಪೊಲೀಸ್ ವಿಶೇಷ ಘಟಕ ಇಬ್ಬರನ್ನು ಬಂಧಿಸಿತ್ತು.

ಕಳೆದ ವಾರ, ದೆಹಲಿ ಹೈಕೋರ್ಟ್ ವೆಬ್‌ಸೈಟ್ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಅವರ ವಿರುದ್ಧದ ಆರೋಪಗಳು ತಕ್ಷಣದ ಪರಿಹಾರವನ್ನು ನೀಡಬಹುದಾದಂತಹ ಸ್ವರೂಪದಲ್ಲಿರಲಿಲ್ಲ ಎಂದು ಹೇಳಿದರು. ಆರೋಪಗಳು ನಿಮಗೆ ತಕ್ಷಣದ ಪರಿಹಾರವನ್ನು ನೀಡುವಂತಹ ಸ್ವರೂಪವನ್ನು ತೋರುತ್ತಿಲ್ಲ. ನೀವು ಸರಿ ಅಥವಾ ತಪ್ಪಾಗಿರಬಹುದು, ಆದರೆ ನಾವು ಅವರಿಗೆ (ದೆಹಲಿ ಪೊಲೀಸರಿಗೆ) ವಿಚಾರಣೆಗಾಗಿ ನೀಡಬೇಕಾಗಿದೆ ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರು ಇಬ್ಬರು ಬಂಧಿತರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ತಿಳಿಸಿದರು.

ಕಳೆದ ಮಂಗಳವಾರ ಕನಿಷ್ಠ 400 ದೆಹಲಿ ಪೊಲೀಸ್ ಅಧಿಕಾರಿಗಳು ದೆಹಲಿ-ಎನ್‌ಸಿಆರ್ ಮತ್ತು ಮುಂಬೈನ 30 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪತ್ರಕರ್ತರು,ಫ್ರೀಲ್ಯಾನ್ಸರ್​​ಗಳು, ಬರಹಗಾರರು ಮತ್ತು ವಿಡಂಬನಕಾರರು ಸೇರಿದಂತೆ 46 ಜನರನ್ನು ಪ್ರಶ್ನಿಸಿದ್ದಾರೆ. ದಿ ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟವಾದ ತನಿಖೆಯ ನಂತರ ಈ ಪೋರ್ಟಲ್ ಜಾಗತಿಕ ನೆಟ್‌ವರ್ಕ್‌ನ ಭಾಗವಾಗಿದೆ ಮತ್ತು ಚೀನಾದಿಂದ ಹಣ ಪಡೆದಿದೆ ಎಂದು ಆರೋಪಿಸಿದ ನಂತರ ದಾಳಿ ನಡೆಸಲಾಗಿದೆ.

2009 ರಲ್ಲಿ ಸ್ಥಾಪಿಸಲಾದ ಪೋರ್ಟಲ್ 2021 ರಲ್ಲಿ ತೊಂದರೆಗೆ ಸಿಲುಕಿತು. 2020 ರಲ್ಲಿ ದೆಹಲಿ ಪೋಲೀಸ್‌ನ ಆರ್ಥಿಕ ಅಪರಾಧ ವಿಭಾಗವು ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ಪ್ರಕರಣವನ್ನು ದಾಖಲಿಸಿತು. ಈ ಆರೋಪಗಳಲ್ಲಿ ಷೇರುಗಳ ಅತಿಯಾದ ಮೌಲ್ಯ, ಹಣವನ್ನು ಬೇರೆಡೆಗೆ ತಿರುಗಿಸುವುದು ಮತ್ತು ಎಫ್‌ಡಿಐ ನಿಯಮಗಳ ಉಲ್ಲಂಘನೆ ಸೇರಿದೆ.

ಇದನ್ನೂ ಓದಿ: ನ್ಯೂಸ್​​ಕ್ಲಿಕ್​​ನ ಮಾಜಿ ಸಿಬ್ಬಂದಿಯ ಕೇರಳದಲ್ಲಿರುವ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

ಒಂದು ವರ್ಷದ ನಂತರ, ಕೇಂದ್ರೀಯ ಸಂಸ್ಥೆಯು ವೆಬ್‌ಸೈಟ್‌ನ ಆವರಣ ಮತ್ತು ಅದರ ಸಂಸ್ಥಾಪಕ ಪುರಕಾಯಸ್ಥ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿತು,ಕಂಪನಿಯು ಸೇವೆಗಳಿಗಾಗಿ ಕೋಟಿಗಟ್ಟಲೆ ಹಣವನ್ನು ಪಡೆದಿದೆ ಎಂದು ಆರೋಪಿಸಲಾಗಿದ್ದು, ಅದರಲ್ಲಿ ₹1.55 ಕೋಟಿಯನ್ನು ಎಲೆಕ್ಟ್ರಿಷಿಯನ್‌ಗೆ ನೀಡಲಾಗಿದ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್ ಗೆತಿಳಿಸಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ಪುರಕಾಯಸ್ಥ ಮತ್ತು ಗೌತಮ್ ನವ್ಲಾಖಾ ಅವರು ಅಮೆರಿಕದ ರಕ್ಷಣಾ ಪೂರೈಕೆದಾರ ಕಂಪನಿಯೊಂದಿಗೆ ಕಂಪನಿಯನ್ನು ಸಂಯೋಜಿಸಿದ್ದಾರೆ. ಪುರಕಾಯಸ್ಥ ಮತ್ತು ನೆವಿಲ್ಲೆ ರಾಯ್ ಸಿಂಗಮ್ ನಡುವೆ ಭಾರತದ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶದಿಂದ ಕೆಲವು ಇ-ಮೇಲ್‌ಗಳನ್ನು ವಿನಿಮಯ ಮಾಡಿಕೊಂಡಿರುವುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ