AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಹಯ್ಯಾ ಲಾಲ್‌ ಪಾರ್ಥಿವ ಶರೀರ ಕುಟುಂಬದವರಿಗೆ ಹಸ್ತಾಂತರ; ಮುಗಿಲು‌ ಮುಟ್ಟಿದ ಆಕ್ರಂದನ, ಪೊಲೀಸರ ವಿರುದ್ಧ ಆಕ್ರೋಶದ ಕೂಗು

ಬಿಗಿ ಬಂದೋಬಸ್ತ್ ನಡುವೆ ಮೃತದೇಹವನ್ನು ತರಲಾಗಿದ್ದು ನೂರಾರು ಮಂದಿ ಜನರು ಮನೆ ಬಳಿ ನೆರೆದಿದ್ದರು. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸುವ ಕೂಗು ಅಲ್ಲಿ ಕೇಳಿ ಬಂತು.

ಕನ್ಹಯ್ಯಾ ಲಾಲ್‌ ಪಾರ್ಥಿವ ಶರೀರ ಕುಟುಂಬದವರಿಗೆ ಹಸ್ತಾಂತರ; ಮುಗಿಲು‌ ಮುಟ್ಟಿದ ಆಕ್ರಂದನ, ಪೊಲೀಸರ ವಿರುದ್ಧ ಆಕ್ರೋಶದ ಕೂಗು
ಕನ್ಹಯ್ಯಾ ಲಾಲ್ ಮೃತದೇಹImage Credit source: livehindustan.com
TV9 Web
| Edited By: |

Updated on:Jun 29, 2022 | 1:30 PM

Share

ಪ್ರವಾದಿ(Prophet muhammad) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ(Nupur Sharma) ಬೆಂಬಲಿಸಿ ಪೋಸ್ಟ್‌ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಬರ್ಬರ ಹತ್ಯೆಗೀಡಾದ ಕನ್ಹಯ್ಯಾ ಲಾಲ್‌ರ ( Kanhaiya Lal) ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಇಂದು(ಬುಧವಾರ) ಬೆಳಗ್ಗೆ 11 ಗಂಟೆಗೆ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬಿಗಿ ಬಂದೋಬಸ್ತ್ ನಡುವೆ ಮೃತದೇಹವನ್ನು ತರಲಾಗಿದ್ದು ನೂರಾರು ಮಂದಿ ಜನರು ಮನೆ ಬಳಿ ನೆರೆದಿದ್ದರು. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸುವ ಕೂಗು ಅಲ್ಲಿ ಕೇಳಿ ಬಂತು. ಮೃತದೇಹ ಮನೆಗೆ ತಲುಪುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕನ್ಹಯ್ಯಾ ಅವರ ಮಗ ಅಳುತ್ತಿದ್ದುದನ್ನು ನೋಡಿ ಎಲ್ಲರೂ ಕಣ್ಣೀರಾಗುತ್ತಿದ್ದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು ಕನ್ಹಯ್ಯಾ ಅಮರ್ ರಹೇ ಎಂದು ಘೋಷಣೆ ಕೂಗುತ್ತಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

ಅಂತಿಮ ಯಾತ್ರೆಯಲ್ಲಿ ಸಾವಿರಾರು  ಜನರು ಭಾಗಿ 

ಇದನ್ನೂ ಓದಿ
Image
Udaipur Murder: ಉದಯಪುರ ಟೈಲರ್ ಹತ್ಯೆಯ ತನಿಖೆಯ ಹೊಣೆ ಎನ್​ಐಎ ಹೆಗಲಿಗೆ; ಗೃಹ ಸಚಿವಾಲಯ ಆದೇಶ
Image
Udaipur Murder: ಉದಯ್​ಪುರದ ಬರ್ಬರ ಕೊಲೆ ಪೂರ್ವ ನಿಯೋಜಿತ, ಜೂನ್ 17ರ ವಿಡಿಯೊ ಬಹಿರಂಗ
Image
ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೇಡಿನ ಸಂಗತಿ, ಇದೊಂದು ವ್ಯವಸ್ಥಿತ ಸಂಚು: ನಳಿನ್ ಕುಮಾರ್ ‌ಕಟೀಲ್
Image
ಟೈಲರ್ ಶಿರಚ್ಛೇದ: ರಾಜಸ್ಥಾನ ರಾಜ್ಯವ್ಯಾಪಿ ನಿಷೇಧಾಜ್ಞೆ ಜಾರಿ, ಬಿಗಿ ಬಂದೋಬಸ್ತ್, ವಿಡಿಯೊ ನೋಡಬೇಡಿ ಎಂದು ಪೊಲೀಸರು

ಗೋವರ್ಧನ ವಿಲಾಸದಿಂದ ಅಂತಿಮ ಯಾತ್ರೆ ಹೊರಟಿದ್ದು  ಅಶೋಕ್ ನಗರದ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. ಕಾಲ್ನಡಿಗೆಯ ಹೊರತಾಗಿ ಅನೇಕರು ಬೈಕ್ ಹಾಗೂ ಇತರ ವಾಹನಗಳಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದರು. ನಗರ ಶಾಸಕ ಮತ್ತು ವಿರೋಧ ಪಕ್ಷದ ನಾಯಕ ಗುಲಾಬ್‌ಚಂದ್ ಕಟಾರಿಯಾ ಕೂಡ ಶವಾಗಾರಕ್ಕೆ ತೆರಳಿ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.

Published On - 1:29 pm, Wed, 29 June 22

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು