AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udaipur Murder: ಉದಯ್​ಪುರದ ಬರ್ಬರ ಕೊಲೆ ಪೂರ್ವ ನಿಯೋಜಿತ, ಜೂನ್ 17ರ ವಿಡಿಯೊ ಬಹಿರಂಗ

ಕೊಲೆಗೆ 11 ದಿನ ಮೊದಲೇ, ಅಂದರೆ ಜೂನ್ 17ರಂದೇ ಕೊಲೆಗಡುಕ ಮೊಹಮದ್ ರಿಯಾಜ್ ಅಖ್ತಾರಿ ತನ್ನ ಉದ್ದೇಶವನ್ನು ಬಹಿರಂಗಪಡಿಸಿದ್ದ

Udaipur Murder: ಉದಯ್​ಪುರದ ಬರ್ಬರ ಕೊಲೆ ಪೂರ್ವ ನಿಯೋಜಿತ, ಜೂನ್ 17ರ ವಿಡಿಯೊ ಬಹಿರಂಗ
ಕೊಲೆ ಅರೋಪಿಗಳಾದ ಮೊಹಮದ್ ರಿಯಾಜ್ ಅಖ್ತಾರಿ ಮತ್ತು ಗೌಸ್ ಮೊಹಮದ್
TV9 Web
| Edited By: |

Updated on: Jun 29, 2022 | 11:00 AM

Share

ದೆಹಲಿ: ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ರಾಜಸ್ಥಾನದ ಉದಯ್​ಪುರ್ ನಗರದ ನಿವಾಸಿ ಟೈಲರ್ ಕನ್ಹಯ್ಯಲಾಲ್ ಹತ್ಯೆಗೆ ಜೂನ್ 17ರಂದೇ ಭೂಮಿಕೆ ಸಿದ್ಧವಾಗಿತ್ತು ಎನ್ನುವ ಆಘಾತಕಾರಿ ವಿಚಾರ ಇದೀಗ ಬಹಿರಂಗವಾಗಿದೆ. ಕೊಲೆಗೆ 11 ದಿನ ಮೊದಲೇ, ಅಂದರೆ ಜೂನ್ 17ರಂದೇ ಕೊಲೆಗಡುಕ ಮೊಹಮದ್ ರಿಯಾಜ್ ಅಖ್ತಾರಿ ತನ್ನ ಉದ್ದೇಶವನ್ನು ಬಹಿರಂಗಪಡಿಸಿದ್ದ. ಅಷ್ಟೇ ಅಲ್ಲದೆ, ಅತ್ಯಂತ ಹೆಮ್ಮೆಯಿಂದ ತನ್ನ ಉದ್ದೇಶಿತ ಕೃತ್ಯಕ್ಕೆ ವಿವರಣೆಯನ್ನೂ ಕೊಟ್ಟುಕೊಂಡಿದ್ದ. ನಾನು ಮೊದಲ ಕೊಲೆ ಮಾಡಿದ ನಂತರ ಇನ್ನಷ್ಟು ಜನರನ್ನು ಇದೇ ರೀತಿ ಕೊಂದುಹಾಕಿ ಎಂದು ಕರೆ ನೀಡಿದ್ದ.

ಜೂನ್ 17ರಂದು ಕ್ರೀಮ್ ಕುರ್ತಾ ಮತ್ತು ಹಸಿರು ರುಮಾಲಿನೊಂದಿಗೆ ಕ್ಯಾಮೆರಾ ಎದುರು ಬಂದಿದ್ದ ಅಖ್ತಾರಿ 2.33 ನಿಮಿಷಗಳ ವಿಡಿಯೊ ರೆಕಾರ್ಡ್ ಮಾಡಿದ್ದ. ತನ್ನ ಹೆಸರು, ದಿನಾಂಕ ಮತ್ತು ತನ್ನ ವಾಸಸ್ಥಳದ ವಿವರಗಳೊಂದಿಗೆ ವಿಡಿಯೊ ಚಿತ್ರೀಕರಿಸಿದ್ದ. ಇಸ್ಲಾಂ ಅವಹೇಳನ ಮಾಡಿರುವವರ ತಲೆ ತೆಗೆಯುವುದಾಗಿ ವಿಡಿಯೊದಲ್ಲಿ ಭರವಸೆಯನ್ನೂ ಕೊಟ್ಟಿದ್ದ.

ಉದಯಪುರದ ಸೆಕ್ಟರ್​ 11ರಲ್ಲಿ ವಾಸವಿರುವ ಧರ್ಮನಿಂದಕರ ತಲೆಯನ್ನು ನಾನು ತೆಗೆಯುತ್ತೇನೆ. ಉಳಿದವರು ಉಳಿದವರು ಅದೇ ಮೇಲ್ಪಂಕ್ತಿ ಅನುಸರಿಸಬೇಕು ಎಂದು ರಿಯಾಜ್ ತನ್ನ ವಿಡಿಯೊದಲ್ಲಿ ಕರೆ ನೀಡಿದ್ದ. ಮೃತ ಕನ್ಹಯ್ಯ ಲಾಲ್ ಸಹ ಇದೇ ಸೆಕ್ಟರ್ 11ರಲ್ಲಿ ವಾಸವಾಗಿದ್ದರು. ನನ್ನ ಕುಟುಂಬಕ್ಕೆ ಅಥವಾ ನನ್ನ ವ್ಯಾಪಾರಕ್ಕೆ ಏನಾಗುತ್ತದೆ ಎನ್ನುವ ಬಗ್ಗೆ ಯಾರೂ ಚಿಂತಿಸುವ ಅಗತ್ಯವಿಲ್ಲ. ನನ್ನದೆನ್ನುವ ಎಲ್ಲವನ್ನೂ ರಸೂಲ್-ಎ-ಪಾಕ್ (ಪ್ರವಾದಿ) ಅವರಿಗೆ ಸಮರ್ಪಿಸಲು ನಾನು ಸಿದ್ಧನಿದ್ದೇನೆ ಎಂದು ಅಖ್ತಾರಿ ಹೇಳಿದ್ದ.

ಇದನ್ನೂ ಓದಿ
Image
ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೇಡಿನ ಸಂಗತಿ, ಇದೊಂದು ವ್ಯವಸ್ಥಿತ ಸಂಚು: ನಳಿನ್ ಕುಮಾರ್ ‌ಕಟೀಲ್
Image
ಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯ ಉಚ್ಛಾಟಿತ ನಾಯಕ ನವೀನ್​ ಕುಮಾರ್​ ಜಿಂದಾಲ್​ಗೆ ಕೊಲೆ ಬೆದರಿಕೆ
Image
ಟೈಲರ್ ಶಿರಚ್ಛೇದ: ರಾಜಸ್ಥಾನ ರಾಜ್ಯವ್ಯಾಪಿ ನಿಷೇಧಾಜ್ಞೆ ಜಾರಿ, ಬಿಗಿ ಬಂದೋಬಸ್ತ್, ವಿಡಿಯೊ ನೋಡಬೇಡಿ ಎಂದು ಪೊಲೀಸರು
Image
Udaipur Murder: ಉದಯಪುರ ಹತ್ಯೆ ಪ್ರಕರಣ; ಹಿಂದೂ ಯುವಕನ ಹಂತಕನಿಗೆ ಐಸಿಸ್​ ಲಿಂಕ್?

ಇತರರು ಸಹ ತನ್ನ ಮಾದರಿಯನ್ನು ಯಾವುದೇ ಹೆದರಿಕೆಯಿಲ್ಲದೆ ಅನುಸರಿಸಬೇಕು. ಒಂದು ವೇಳೆ ಸಾವು ಬಂದರೂ ನಾನು ಹೆದರುವುದಿಲ್ಲ. ಸಾವು ಎನ್ನುವುದು ಸ್ವರ್ಗವಿದ್ದಂತೆ. ಜೈಲಿಗೆ ಹೋದರೂ ಪರವಾಗಿಲ್ಲ. ಯಾವುದೇ ಚಿಂತೆಯಿಲ್ಲ ಎಂದು ಹೇಳಿದ್ದ. ಹಿಂದೂಗಳೊಂದಿಗೆ ಶಾಂತಿ ಮತ್ತು ಸೌಹಾರ್ದದಿಂದ ವರ್ತಿಸಬೇಕು ಎನ್ನುವ ಮುಸ್ಲಿಮ್ ಸಮುದಾಯದ ಹಿರಿಯ ಬಗ್ಗೆಯೂ ಅಖ್ತಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ. ಮುಸ್ಲಿಮೇತರರ ಬಗ್ಗೆ ಮಾತನಾಡಲು ನೀವು ಹೆದರುತ್ತೀರಿ. ಹಸಿರು ಬಳೆ ತೊಟ್ಟು ಮನೆಗಳಲ್ಲಿಯೇ ಇರಿ ಎಂದು ಹೇಳಿದ್ದ.

ರಿಯಾಜ್ ಮೂಲತಃ ಬಿಲ್ವಾರಾದವನು. 2002ರಲ್ಲಿ ದುಬೈಗೆ ತೆರಳಿದ್ದ. ನಂತರ ಹಿಂದಿರುಗಿರಲಿಲ್ಲ ಎಂದು ಸಂಬಂಧಿಕರೊಬ್ಬರು ತಿಳಿಸಿದರು.

ಕನ್ಹಯ್ಯಲಾಲ್ ಕೊಲೆಯ ನಂತರ ರೆಕಾರ್ಡ್ ಮಾಡಿದ ವಿಡಿಯೊದಲ್ಲಿ ಕಾಣಿಸಿಕೊಂಡಿರುವ ಗೌಸ್ ಮೊಹಮದ್ ಓರ್ವ ದಿನಸಿ ವ್ಯಾಪಾರಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೊಲೆಯ ವಿಡಿಯೊ ಮಾಡಿದ್ದ ಗೌಸ್​ ಮೊಹಮದ್​ ನಂತರ ಅದೇ ವಿಡಿಯೊದಲ್ಲಿ ಚಾಕುವಿನೊಂದಿಗೆ ಕಾಣಿಸಿಕೊಂಡಿದ್ದ. ಘಟನೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ (ಜೂನ್ 28) ಧಾನ್ ಮಂಡಿ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್​ಇನ್​ಸ್ಪೆಕ್ಟರ್ ಒಬ್ಬರನ್ನು ರಾಜಸ್ಥಾನ ಸರ್ಕಾರ ಅಮಾನತು ಮಾಡಿದೆ.

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು