ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು. ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ
ಸಾಧು ಶ್ರೀನಾಥ್​

Updated on: Nov 30, 2019 | 3:24 PM

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು.

ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

Published On - 3:20 pm, Sat, 30 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us