AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena: ಪ್ರಜಾಪ್ರಭುತ್ವದ ಕೊಲೆ; ಶಿವಸೇನೆ ಚಿಹ್ನೆ ಶಿಂಧೆ ಬಣದ ಪಾಲಾಗಿದ್ದಕ್ಕೆ ಉದ್ಧವ್ ಠಾಕ್ರೆ ಕಿಡಿ

ಪ್ರಜಾಪ್ರಭುತ್ವವು ಮೃತಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಈಗ ಕೆಂಪುಕೋಟೆಯಲ್ಲಿ ನಿಂತು ಘೋಷಿಸಬಹುದು ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ.

Shiv Sena: ಪ್ರಜಾಪ್ರಭುತ್ವದ ಕೊಲೆ; ಶಿವಸೇನೆ ಚಿಹ್ನೆ ಶಿಂಧೆ ಬಣದ ಪಾಲಾಗಿದ್ದಕ್ಕೆ ಉದ್ಧವ್ ಠಾಕ್ರೆ ಕಿಡಿ
ಉದ್ಧವ್ ಠಾಕ್ರೆ Image Credit source: NDTV
Ganapathi Sharma
|

Updated on: Feb 18, 2023 | 7:31 AM

Share

ಮುಂಬೈ: ಶಿವಸೇನಾ (Shiv Sena) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಬಣಕ್ಕೆ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray), ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟೀಕಿಸಿದ್ದಾರೆ. ಶಿಂಧೆ ಅವರು ಬಂಡಾಯವೆದ್ದು ಬಿಜೆಪಿ ಜತೆ ಕೈಜೋಡಿಸಿದ ಸುಮಾರು 8 ತಿಂಗಳ ನಂತರ ಚುನಾವಣಾ ಆಯೋಗ ಪಕ್ಷದ ಹೆಸರು ಮತ್ತು ಚಿಹ್ನೆಗೆ ಸಂಬಂಧಿಸಿದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿತ್ತು. ಅವರು ಶಿವಸೇನಾ ಚಿಹ್ನೆಯನ್ನು ಕಳವು ಮಾಡಿದ್ದಾರೆ. ನಾವು ಭರವಸೆ ಕಳೆದುಕೊಳ್ಳುವುದಿಲ್ಲ. ಹೋರಾಟ ಮುಂದುವರಿಸಲಿದ್ದೇವೆ. ಸದ್ಯಕ್ಕೆ ಕಳ್ಳತನದ ಮೂಲಕ ಶಿಂಧೆ ಖುಷಿಯಾಗಿರಬಹುದು. ಒಮ್ಮೆ ದೇಶದ್ರೋಹಿಯಾದರೆ ಆತ ಎಂದಿಗೂ ದೇಶದ್ರೋಹಿಯೇ ಎಂದು ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

ಶುಕ್ರವಾರ ನಿರ್ಧಾರ ಪ್ರಕಟಿಸಿದ್ದ ಕೇಂದ್ರ ಚುನಾವಣಾ ಆಯೋಗ, ‘ಶಿವಸೇನಾ’ ಎಂಬ ಹೆಸರು ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂಧೆ ಬಣಕ್ಕೆ ನೀಡಿತ್ತು. ಉದ್ಧವ್ ಠಾಕ್ರೆ ಬಣವು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎಂದು ಗುರುತಿಸಿಕೊಳ್ಳಬಹುದು ಎಂಬುದಾಗಿ ಸೂಚಿಸಿತ್ತು. ಈ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಠಾಕ್ರೆ ಟೀಕಿಸಿದ್ದಾರೆ.

ಪ್ರಜಾಪ್ರಭುತ್ವವು ಮೃತಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಈಗ ಕೆಂಪುಕೋಟೆಯಲ್ಲಿ ನಿಂತು ಘೋಷಿಸಬಹುದು ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ‘ಬಿಲ್ಲು ಬಾಣ’ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಈ ಮಧ್ಯೆ, ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಪಕ್ಷದ ಚಿಹ್ನೆ ವಿವಾದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಆದೇಶ ನೀಡಿದೆ ಚುನಾವಣಾ ಆಯೋಗದ ಆದೇಶವನ್ನು ‘ಸುಪ್ರೀಂ ಕೋರ್ಟ್​’ನಲ್ಲಿ ಪ್ರಶ್ನಿಸುತ್ತೇವೆ ಎಂದು ಮಾಜಿ ಸಿಎಂ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಈ ಹಿಂದೆ ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಎರಡು ಬಣಗಳು ಶಿವಸೇನೆ ಚಿಹ್ನೆ ಬಳಸಬಾರದು ಎಂದು ಚುನಾವಣಾ ಆಯೋಗ ಹೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ