AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಜ್ರಿವಾಲ್​​ಗೆ ಭರವಸೆ; ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ ಎಂದ ಉದ್ಧವ್ ಠಾಕ್ರೆ

ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ. ನಮ್ಮನ್ನು 'ವಿರೋಧ' ಪಕ್ಷಗಳು ಎಂದು ಕರೆಯಬಾರದು ಎಂದು ನಾನು ಭಾವಿಸುತ್ತೇನೆ, ವಾಸ್ತವವಾಗಿ, ಅವರು (ಕೇಂದ್ರವನ್ನು) 'ವಿರೋಧ' ಎಂದು ಕರೆಯಬೇಕು ಏಕೆಂದರೆ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ ಎಂದ ಠಾಕ್ರೆ

ಕೇಜ್ರಿವಾಲ್​​ಗೆ ಭರವಸೆ; ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ ಎಂದ ಉದ್ಧವ್ ಠಾಕ್ರೆ
ಕೇಜ್ರಿವಾಲ್ ಜತೆ ಉದ್ಧವ್ ಠಾಕ್ರೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 24, 2023 | 4:17 PM

Share

ಮುಖ್ಯಾಂಶಗಳು

  • ಉಭಯ ನಾಯಕರು ಮುಂಬೈನಲ್ಲಿ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಭೇಟಿಯಾದರು.
  • ಈ ಮಸೂದೆ (ಸುಗ್ರೀವಾಜ್ಞೆ) ಸಂಸತ್ತಿನಲ್ಲಿ ಅಂಗೀಕಾರವಾಗದಿದ್ದರೆ 2024 ರಲ್ಲಿ ಮೋದಿ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು.
  • ಕೇಂದ್ರ ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ ನಾವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುತ್ತೇವೆ ಎಂದ ಮಮತಾ ಬ್ಯಾನರ್ಜಿ

ಮುಂಬೈ: ದೆಹಲಿಯ ಅಧಿಕಾರಿಗಳನ್ನು ನಿಯಂತ್ರಿಸುವ ಸರ್ಕಾರದ ವಿಶೇಷ ಆದೇಶವನ್ನು ತಡೆಯಲು ಆಮ್ ಆದ್ಮಿ ಪಕ್ಷಕ್ಕೆ (AAP) ಸಹಾಯ ಮಾಡುವುದಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಭರವಸೆ ನೀಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಬುಧವಾರ ಹೇಳಿದ್ದಾರೆ. ಉಭಯ ನಾಯಕರು ಮುಂಬೈನಲ್ಲಿ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಭೇಟಿಯಾದರು. ಅಲ್ಲಿ ಕೇಜ್ರಿವಾಲ್ ಜತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಮತ್ತು ದೆಹಲಿ ಸಚಿವೆ ಅತಿಶಿ ಕೂಡಾ ಇದ್ದರು.

ಸಂಸತ್ತಿನಲ್ಲಿ ನಮ್ಮನ್ನು ಬೆಂಬಲಿಸುವುದಾಗಿ ಉದ್ಧವ್ ಠಾಕ್ರೆ ಭರವಸೆ ನೀಡಿದ್ದಾರೆ. ಈ ಮಸೂದೆ (ಸುಗ್ರೀವಾಜ್ಞೆ) ಸಂಸತ್ತಿನಲ್ಲಿ ಅಂಗೀಕಾರವಾಗದಿದ್ದರೆ 2024 ರಲ್ಲಿ ಮೋದಿ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು.

ನಾವೆಲ್ಲರೂ ದೇಶ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಬಂದಿದ್ದೇವೆ. ನಮ್ಮನ್ನು ‘ವಿರೋಧ’ ಪಕ್ಷಗಳು ಎಂದು ಕರೆಯಬಾರದು ಎಂದು ನಾನು ಭಾವಿಸುತ್ತೇನೆ, ವಾಸ್ತವವಾಗಿ, ಅವರು (ಕೇಂದ್ರವನ್ನು) ‘ವಿರೋಧ’ ಎಂದು ಕರೆಯಬೇಕು ಏಕೆಂದರೆ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ ಎಂದು ಹೇಳಿದ್ದಾರೆ.

ಮಂಗಳವಾರ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಎಎಪಿಯ ಹೋರಾಟಕ್ಕೆ ಬೆಂಬಲವನ್ನು ಸಂಗ್ರಹಿಸಲು ತಮ್ಮ ರಾಷ್ಟ್ರವ್ಯಾಪಿ ಪ್ರವಾಸದ ಭಾಗವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತಾದಲ್ಲಿ ಭೇಟಿಯಾದರು. ಕೇಜ್ರಿವಾಲ್‌ಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಬ್ಯಾನರ್ಜಿ, 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯನ್ನು ಸೋಲಿಸಲು ನಮಗೆ ಅವಕಾಶ ನೀಡುವುದಾಗಿ ಹೇಳಿದರು. “ಕೇಂದ್ರ ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ ನಾವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬೆಂಬಲಿಸುತ್ತೇವೆ.ಬಿಜೆಪಿಯ ಕಾನೂನಿಗೆ ಮತ ಹಾಕದಂತೆ ಎಲ್ಲಾ ಪಕ್ಷಗಳಿಗೆ ವಿನಂತಿಸುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್; ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟದಲ್ಲಿ ಎಎಪಿಗೆ ಟಿಎಂಸಿ ಬೆಂಬಲ

ದೆಹಲಿಯಲ್ಲಿ ಗ್ರೂಪ್-ಎ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗೆ ಅಧಿಕಾರವನ್ನು ರಚಿಸಲು ಕೇಂದ್ರವು ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಸೇವೆಗಳ ನಿಯಂತ್ರಣದ ಕುರಿತು ಅದು ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆ ಎಂದು ಎಎಪಿ ಹೇಳಿದೆ.

ಅಧಿಕಾರಿಗಳ  ಮೇಲೆ ನಗರ-ರಾಜ್ಯದ ಚುನಾಯಿತ ಸರ್ಕಾರದ ಪ್ರಾಮುಖ್ಯತೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪಿನ ಕೆಲವೇ ದಿನಗಳ ನಂತರ ಕೇಂದ್ರವು ಮೇ 19 ರಂದು ಹೊರಡಿಸಿದ ಸುಗ್ರೀವಾಜ್ಞೆ  ಲೆಫ್ಟಿನೆಂಟ್ ಗವರ್ನರ್ ಸ್ಥಾನವನ್ನು ಬಲಪಡಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ