AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crisis: ಏಕನಾಥ್ ಶಿಂದೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ಕಿತ್ತೊಗೆದ ಉದ್ಧವ್ ಠಾಕ್ರೆ

ಪಕ್ಷದ ವಿರುದ್ಧವೇ ತಂತ್ರ ಹೆಣೆದು ಇದೀಗ ಮುಖ್ಯಮಂತ್ರಿ ಪಟ್ಟ ಏರಿರುವ ಏಕನಾಥ್ ಶಿಂದೆಯವರನ್ನು ಉದ್ಧವ್ ಠಾಕ್ರೆ ಶಿವಸೇನಾ ನಾಯಕ ಸ್ಥಾನದಿಂದ ತೆಗೆದುಹಾಕಿದ್ದಾರೆ. ಶಿಂದೆ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಠಾಕ್ರೆ ಸರ್ಕಾರ ಬುಡಮೇಲಾಗಿತ್ತು, ಆ ಕೋಪವನ್ನು ಠಾಕ್ರೆ ಈ ರೀತಿ ತೋರಿಸಿಕೊಂಡಿದ್ದಾರೆ.

Maharashtra Crisis: ಏಕನಾಥ್ ಶಿಂದೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ಕಿತ್ತೊಗೆದ ಉದ್ಧವ್ ಠಾಕ್ರೆ
Eknath Shinde
TV9 Web
| Edited By: |

Updated on:Jul 02, 2022 | 9:45 AM

Share

ಮುಂಬೈ: ಪಕ್ಷದ ವಿರುದ್ಧವೇ ತಂತ್ರ ಹೆಣೆದು ಇದೀಗ ಮುಖ್ಯಮಂತ್ರಿ ಪಟ್ಟ ಏರಿರುವ  ಏಕನಾಥ್ ಶಿಂದೆಯವರನ್ನು ಉದ್ಧವ್ ಠಾಕ್ರೆ ಶಿವಸೇನಾ ನಾಯಕ ಸ್ಥಾನದಿಂದ ತೆಗೆದುಹಾಕಿದ್ದಾರೆ. ಶಿಂದೆ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಠಾಕ್ರೆ ಸರ್ಕಾರ ಬುಡಮೇಲಾಗಿತ್ತು, ಆ ಕೋಪವನ್ನು ಠಾಕ್ರೆ ಈ ರೀತಿ ತೋರಿಸಿಕೊಂಡಿದ್ದಾರೆ.

ಶಿವಸೇನೆಯಲ್ಲಿ ಅಧ್ಯಕ್ಷರ ನಂತರದ ಸ್ಥಾನವನ್ನು ಸಂಘಟನೆಯ ನಾಯಕನಿಗೆ ನೀಡಲಾಗುತ್ತಿತ್ತು, ‘ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ನೀವು ನಿಮ್ಮನ್ನು ತೊಡಗಿಸಿಕೊಂಡಿದ್ದೀರಿ, ನೀವಾಗಿಯೇ ಶಿವಸೇನೆಯ ಸದಸ್ಯತ್ವದಿಂದ ಹೊರಬಂದಿದ್ದೀರಿ, ಹಾಗಾಗಿ ನಾನು ನಿಮ್ಮನ್ನು ಶಿವಸೇನೆ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕುತ್ತಿದ್ದೇನೆ’ ಎಂದು ಠಾಕ್ರೆ ನೀಡಿರುವ ನೋಟಿಸ್​ನಲ್ಲಿ ಬರೆಯಲಾಗಿದೆ.

ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟವಾದ ಮಹಾ ವಿಕಾಸ ಆಘಾಡಿ ನಿರ್ಧರಿಸಿದೆ. ಆದರೆ, ಅಭ್ಯರ್ಥಿ ಯಾರು ಎಂಬುದಿನ್ನೂ ನಿರ್ಧಾರವಾಗಿಲ್ಲ.

ಏಕನಾಥ್ ಶಿಂದೆ 39 ಶಾಸಕರ ಜೊತೆಗೂಡಿ ಶಿವಸೇನಾ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದು ಎಂಬುದನ್ನು ಅರಿತ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಬಿಜೆಪಿಗೆ 165 ಶಾಸಕರ ಬೆಂಬಲವಿದೆ. ಬಿಜೆಪಿಯು 106 ಶಾಸಕರ ಬಲ ಹೊಂದಿದೆ, ಶಿವಸೇನಾದ 39 ಶಾಸಕರ ಬೆಂಬಲವಿದೆ. 10 ಪಕ್ಷೇತರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಇನ್ನೂ ಕೆಲವು ಪಕ್ಷಗಳು ಬೆಂಬಲ ಸೂಚಿಸಿವೆ.

ಎರಡು ದಿನಗಳ ವಿಶೇಷ ಅಧಿವೇಶನ ಭಾನುವಾರ ಆರಂಭವಾಗಲಿದ್ದು, ಚುನಾವಣೆ ನಡೆಸಬೇಕಾದ ಅಗತ್ಯ ಬಿದ್ದರೆ ಭಾನುವಾರ ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 9:44 am, Sat, 2 July 22

Follow Us
TV9 Web
TV9 Web

TV9 Kannada

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ