AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crisis: ಏಕನಾಥ್ ಶಿಂದೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ಕಿತ್ತೊಗೆದ ಉದ್ಧವ್ ಠಾಕ್ರೆ

ಪಕ್ಷದ ವಿರುದ್ಧವೇ ತಂತ್ರ ಹೆಣೆದು ಇದೀಗ ಮುಖ್ಯಮಂತ್ರಿ ಪಟ್ಟ ಏರಿರುವ ಏಕನಾಥ್ ಶಿಂದೆಯವರನ್ನು ಉದ್ಧವ್ ಠಾಕ್ರೆ ಶಿವಸೇನಾ ನಾಯಕ ಸ್ಥಾನದಿಂದ ತೆಗೆದುಹಾಕಿದ್ದಾರೆ. ಶಿಂದೆ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಠಾಕ್ರೆ ಸರ್ಕಾರ ಬುಡಮೇಲಾಗಿತ್ತು, ಆ ಕೋಪವನ್ನು ಠಾಕ್ರೆ ಈ ರೀತಿ ತೋರಿಸಿಕೊಂಡಿದ್ದಾರೆ.

Maharashtra Crisis: ಏಕನಾಥ್ ಶಿಂದೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ಕಿತ್ತೊಗೆದ ಉದ್ಧವ್ ಠಾಕ್ರೆ
Eknath Shinde
TV9 Web
| Edited By: |

Updated on:Jul 02, 2022 | 9:45 AM

Share

ಮುಂಬೈ: ಪಕ್ಷದ ವಿರುದ್ಧವೇ ತಂತ್ರ ಹೆಣೆದು ಇದೀಗ ಮುಖ್ಯಮಂತ್ರಿ ಪಟ್ಟ ಏರಿರುವ  ಏಕನಾಥ್ ಶಿಂದೆಯವರನ್ನು ಉದ್ಧವ್ ಠಾಕ್ರೆ ಶಿವಸೇನಾ ನಾಯಕ ಸ್ಥಾನದಿಂದ ತೆಗೆದುಹಾಕಿದ್ದಾರೆ. ಶಿಂದೆ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಠಾಕ್ರೆ ಸರ್ಕಾರ ಬುಡಮೇಲಾಗಿತ್ತು, ಆ ಕೋಪವನ್ನು ಠಾಕ್ರೆ ಈ ರೀತಿ ತೋರಿಸಿಕೊಂಡಿದ್ದಾರೆ.

ಶಿವಸೇನೆಯಲ್ಲಿ ಅಧ್ಯಕ್ಷರ ನಂತರದ ಸ್ಥಾನವನ್ನು ಸಂಘಟನೆಯ ನಾಯಕನಿಗೆ ನೀಡಲಾಗುತ್ತಿತ್ತು, ‘ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ನೀವು ನಿಮ್ಮನ್ನು ತೊಡಗಿಸಿಕೊಂಡಿದ್ದೀರಿ, ನೀವಾಗಿಯೇ ಶಿವಸೇನೆಯ ಸದಸ್ಯತ್ವದಿಂದ ಹೊರಬಂದಿದ್ದೀರಿ, ಹಾಗಾಗಿ ನಾನು ನಿಮ್ಮನ್ನು ಶಿವಸೇನೆ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕುತ್ತಿದ್ದೇನೆ’ ಎಂದು ಠಾಕ್ರೆ ನೀಡಿರುವ ನೋಟಿಸ್​ನಲ್ಲಿ ಬರೆಯಲಾಗಿದೆ.

ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿಕೂಟವಾದ ಮಹಾ ವಿಕಾಸ ಆಘಾಡಿ ನಿರ್ಧರಿಸಿದೆ. ಆದರೆ, ಅಭ್ಯರ್ಥಿ ಯಾರು ಎಂಬುದಿನ್ನೂ ನಿರ್ಧಾರವಾಗಿಲ್ಲ.

ಏಕನಾಥ್ ಶಿಂದೆ 39 ಶಾಸಕರ ಜೊತೆಗೂಡಿ ಶಿವಸೇನಾ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದು ಎಂಬುದನ್ನು ಅರಿತ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಬಿಜೆಪಿಗೆ 165 ಶಾಸಕರ ಬೆಂಬಲವಿದೆ. ಬಿಜೆಪಿಯು 106 ಶಾಸಕರ ಬಲ ಹೊಂದಿದೆ, ಶಿವಸೇನಾದ 39 ಶಾಸಕರ ಬೆಂಬಲವಿದೆ. 10 ಪಕ್ಷೇತರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಇನ್ನೂ ಕೆಲವು ಪಕ್ಷಗಳು ಬೆಂಬಲ ಸೂಚಿಸಿವೆ.

ಎರಡು ದಿನಗಳ ವಿಶೇಷ ಅಧಿವೇಶನ ಭಾನುವಾರ ಆರಂಭವಾಗಲಿದ್ದು, ಚುನಾವಣೆ ನಡೆಸಬೇಕಾದ ಅಗತ್ಯ ಬಿದ್ದರೆ ಭಾನುವಾರ ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 9:44 am, Sat, 2 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?