ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

Maharashtra Assembly Election 2024: ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಮಹಾರಾಷ್ಟ್ರ ಚುನಾವಣೆ: ಉದ್ಧವ್ ಠಾಕ್ರೆಯ ಶಿವಸೇನೆಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಉದ್ಧವ್ ಠಾಕ್ರೆ
Image Credit source: The Hindu

Updated on: Nov 07, 2024 | 2:26 PM

ಉದ್ಧವ್ ಠಾಕ್ರೆ ಬಣದ ಶಿವ ಸೇನೆಯು ಇಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ, ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರಗೊಳಿಸುವುದು ಮತ್ತು ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ರಾಜ್ಯದ ಹೆಣ್ಣುಮಕ್ಕಳು ಸರ್ಕಾರದ ನೀತಿಯಂತೆ ಉಚಿತ ಶಿಕ್ಷಣ ಪಡೆಯುತ್ತಿರುವಂತೆ ಎಂವಿಎ ಅಧಿಕಾರಕ್ಕೆ ಬಂದರೆ, ಎಲ್ಲಾ ವಿದ್ಯಾರ್ಥಿಗಳಿಗೂ ಜಾರಿಗೊಳಿಸಲಾಗುವುದು ಎಂದು ಠಾಕ್ರೆ ಭರವಸೆ ನೀಡಿದರು. ಪ್ರತಿಪಕ್ಷಗಳ ರಾಜಕೀಯ ಪಿತೂರಿಗಳು ಮತ್ತು ವದಂತಿಗಳನ್ನು ಹರಡುತ್ತಿರುವ ಕುರಿತು ಮಾತನಾಡಿ, ನಾನು ಚುನಾವಣಾ ಪ್ರಚಾರಕ್ಕಾಗಿ ಮುಂಬೈನಿಂದ ಹೊರಗೆ ಹೋಗುತ್ತಿದ್ದೇನೆ, ಹಾಗಾಗಿ ಮುಂಬೈನಲ್ಲಿ ಮಹಾ ವಿಕಾಸ್ ಅಘಾಡಿಯ ಮುಂಬರುವ ಪತ್ರಿಕಾಗೋಷ್ಠಿಯಲ್ಲಿ ನಾನು ಭಾಗವಹಿಸದಿದ್ದರೆ, ಮೈತ್ರಿ ಮುರಿದುಹೋಗಿದೆ ಎಂದು ಭಾವಿಸಬೇಡಿ ಎಂದರು.

ಯಾರಿಗೆ ಮತ ಹಾಕಬೇಕು ಮತ್ತು ಏಕೆ, ಯಾವ ಸಿದ್ಧಾಂತಕ್ಕೆ ಮತ ಹಾಕಬೇಕು ಎಂಬುದು ಕೂಡ ಮುಖ್ಯ ಎಂದರು.
ಶಿವಸೇನೆಯ ಪರವಾಗಿ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ ನಂತರ ನಾವು ಏನು ಮಾಡುತ್ತೇವೆ, ನಾವು ಸಾರ್ವಜನಿಕರಿಗೆ ಹೇಗೆ ಸೇವೆ ಸಲ್ಲಿಸುತ್ತೇವೆ ಎಂಬ ಭರವಸೆಯನ್ನು ನಾವು ನೀಡಿದ್ದೇವೆ ಎಂದು ಉದ್ಧವ್ ಠಾಕ್ರೆ ಹೇಳಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 20 ರಂದು ಮತದಾನ ನಡೆಯುತ್ತಿದೆ. ಈ ಸೀಟುಗಳ ಫಲಿತಾಂಶ ನವೆಂಬರ್ 23 ರಂದು ಪ್ರಕಟವಾಗಲಿದೆ.

UBT ಬಣ ಪ್ರಣಾಳಿಕೆಯ ವಿವರಗಳು ಇಲ್ಲಿವೆ-
1. ಶಿಕ್ಷಣ
ಮಹಾರಾಷ್ಟ್ರದಲ್ಲಿ ಜನಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

2. ಪಿಂಚಣಿ
ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಆರಂಭಿಸಲಾಗುವುದು

3. ಆಹಾರ ಭದ್ರತೆ

ರೈತರಿಗೆ ನಷ್ಟವಾಗದಂತೆ ಗೋಧಿ, ಅಕ್ಕಿ, ಎಣ್ಣೆ, ಬೇಳೆಕಾಳುಗಳು ಮತ್ತು ಸಕ್ಕರೆಯಂತಹ ಐದು ಅಗತ್ಯ ವಸ್ತುಗಳ ಬೆಲೆಗಳನ್ನು ಸ್ಥಿರವಾಗಿ ಇರಿಸಲಾಗುವುದು.

4. ಸಂಸ್ಕೃತಿ
ಪ್ರತಿ ಜಿಲ್ಲೆಯಲ್ಲೂ ಶಿವಾಜಿ ಮಹಾರಾಜರ ಸ್ಫೂರ್ತಿದಾಯಕ ಮಂದಿರ ನಿರ್ಮಿಸಲಾಗುವುದು.

5. ಆರೋಗ್ಯ
ಪ್ರತಿ ಕುಟುಂಬಕ್ಕೆ 25 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು.

6. ಮಹಿಳೆಯರು
ಮಹಿಳೆಯರಿಗೆ ನೀಡುವ ಆರ್ಥಿಕ ಸಹಾಯವನ್ನು ಹೆಚ್ಚಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಲಾಗುವುದು.

7. ಮಹಾರಾಷ್ಟ್ರದ ಮಣ್ಣಿನ ಪುತ್ರರಿಗಾಗಿ ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಮತ್ತು ಕೈಗಾರಿಕಾ ಕೇಂದ್ರವನ್ನು ರಚಿಸಲಾಗುವುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us