AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udhayanidhi Stalin detained: ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ!

ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹಾಗೂ ದ್ವಿಅರ್ಥದ ಕಾಮೆಂಟ್ ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮತ್ತು ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

Udhayanidhi Stalin detained: ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ!
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆImage Credit source: PTI
ಭಾವನಾ ಹೆಗಡೆ
|

Updated on:Aug 04, 2026 | 11:42 AM

Share

ಮುಖ್ಯಾಂಶಗಳು

  • ನಟಿ ತ್ರಿಷಾ ವಿರುದ್ಧ ದ್ವಿಅರ್ಥದ ಕಾಮೆಂಟ್ ಮಾಡಿದ ಉದಯನಿಧಿ ಸ್ಟಾಲಿನ್ ಪೋಲಿಸರ ವಶಕ್ಕೆ.
  • ತಂಜಾವೂರಿನ ಕಾವೇರಿ ಪ್ರತಿಭಟನೆಯಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿದ ಡಿಎಂಕೆ ನಾಯಕನ ವಿರುದ್ಧ ತೀವ್ರ ಆಕ್ರೋಶ.
  • ಟಿವಿಕೆ ಪಕ್ಷದ ದೂರಿನ ಬೆನ್ನಲ್ಲೇ ಉದಯನಿಧಿ ನಿವಾಸಕ್ಕೆ ಭಾರಿ ಪೊಲೀಸ್ ಭದ್ರತೆ ನಿಯೋಜನೆ.

ಚೆನ್ನೈ, ಆಗಸ್ಟ್ 04: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧಪಕ್ಷದ ನಾಯಕರಾಗಿರುವ ಡಿಎಂಕೆ (DMK) ಪಕ್ಷದ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಹಿನ್ನೆಲೆಯೇನು?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಉದಯನಿಧಿ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಲು ಪ್ರಾರಂಭಿಸಿದರು. ಇದಕ್ಕೆ ನಗುತ್ತಲೇ ಪ್ರತಿಕ್ರಿಯಿಸಿದ ಉದಯನಿಧಿ, ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು” ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ANI ಹಂಚಿಕೊಂಡ ವೀಡಿಯೋ ಇಲ್ಲಿದೆ

ಟಿವಿಕೆ ದೂರು ಹಾಗೂ ಪೊಲೀಸ್ ಕ್ರಮ

ಉದಯನಿಧಿ ಅವರ ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿರುವ ಟಿವಿ ಕೆ (TVK) ಪಕ್ಷ ಹಾಗೂ ಮಹಿಳಾ ಘಟಕದ ನಾಯಕಿಯರು ತಂಜಾವೂರು ಪೊಲೀಸ್ ಠಾಣೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ದೂರು ನೀಡಿದ್ದಾರೆ. ಮಹಿಳೆಯರನ್ನು ಸಾರ್ವಜನಿಕವಾಗಿ ಅಪಮಾನಿಸುವ ಮತ್ತು ಕೀಳಾಗಿ ಕಾಣುವ ಇಂತಹ ಮಾತುಗಳು ಸಾರ್ವಜನಿಕ ನಾಯಕರಿಗೆ ಶೋಭೆಯಲ್ಲ ಎಂದು ಟಿವಿ ಕೆ ಶಾಸಕರು ಮತ್ತು ನಾಯಕರು ಕಿಡಿಕಾರಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ ಟಿವಿ ಕೆ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರಿಂದ, ನೀಲಂಗರೈನಲ್ಲಿರುವ ಉದಯನಿಧಿ ನಿವಾಸಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಳಿಕ ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಉದಯನಿಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಬಹಿರಂಗ ಕ್ಷಮಾಪಣೆಗೆ ಆಗ್ರಹಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Tue, 4 August 26

Follow Us