AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಜಾಗ ಖರೀದಿಯಲ್ಲಿ ಅವ್ಯವಹಾರ ಆರೋಪ; ಸಂಪೂರ್ಣ ವಿವರವನ್ನು ಟ್ರಸ್ಟ್ ಜನರ ಮುಂದಿಡಲಿದೆ: ಪೇಜಾವರ ಶ್ರೀ

ಈ ವೇಳೆ ಟ್ರಸ್ಟ್‌ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಇಂಜಿನಿಯರ್ಸ್, ಪೇಜಾವರ ಶ್ರೀಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ರಾಮಮಂದಿರ ಜಾಗ ಖರೀದಿಯಲ್ಲಿ ಅವ್ಯವಹಾರ ಆರೋಪ; ಸಂಪೂರ್ಣ ವಿವರವನ್ನು ಟ್ರಸ್ಟ್ ಜನರ ಮುಂದಿಡಲಿದೆ: ಪೇಜಾವರ ಶ್ರೀ
ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀ
TV9 Web
| Updated By: ganapathi bhat|

Updated on: Jun 30, 2021 | 11:01 PM

Share

ಉಡುಪಿ: ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರಿಯುತ್ತಿದೆ. ಇದೇ ವೇಳೆ ಜಾಗ ಖರೀದಿಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ. ಆದರೆ, ರಾಮಮಂದಿರ ಟ್ರಸ್ಟ್​ನಿಂದ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥಶ್ರೀ ಹೇಳಿಕೆ ನೀಡಿದ್ದಾರೆ. ಟ್ರಸ್ಟ್​ನ ಕಾರ್ಯದರ್ಶಿಗಳು, ಖಜಾಂಜಿ, ಸದಸ್ಯರಿಂದ ಚರ್ಚೆ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಟ್ರಸ್ಟ್ ಜನರ ಮುಂದಿಡಲಿದೆ. 2 ದಿನದಲ್ಲಿ ಎಲ್ಲವನ್ನೂ ಸಮಾಜದ ಮುಂದೆ ಇಡಲಿದ್ದಾರೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾದ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಬುಧವಾರ ಧರ್ಮನಗರಿಗೆ ಭೇಟಿ ನೀಡಿ, ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ.

ಆರಂಭದಲ್ಲಿ ಶ್ರೀರಾಮ ಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ ಪೇಜಾವರ ಶ್ರೀಗಳು ದರ್ಶನ ಪಡೆದಿದ್ದಾರೆ. ದೇವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಮಂದಿರ ನಿರ್ಮಾಣ ಮಾಡುವ ಬುನಾದಿ ತುಂಬಿಸುವ ಸ್ಥಳಕ್ಕೆ ತೆರಳಿ, ಅಲ್ಲಿ ನಡೆಯುತ್ತಿರುವ ಕಾಮಗಾರಿ ಪರಿವೀಕ್ಷಿಸಿದರು. ಈವರೆಗೆ ನಡೆದ ಕಾಮಗಾರಿಯ ಪ್ರಗತಿಯನ್ನು ಇಂಜಿನಿಯರ್ಸ್ ವಿವರಿಸಿದ್ದಾರೆ.

ಈ ವೇಳೆ ಟ್ರಸ್ಟ್‌ನ ವಿಶ್ವಸ್ಥ ಡಾ. ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಇಂಜಿನಿಯರ್ಸ್, ಪೇಜಾವರ ಶ್ರೀಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ; ವಿಹೆಚ್​ಪಿ ಪುಂಡುಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ

ರಾಮ ಮಂದಿರ ಟ್ರಸ್ಟ್​​ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್​ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತ ಸೇರಿ ಮೂವರ ವಿರುದ್ಧ ಎಫ್​ಐಆರ್​

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ