AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹುಟ್ಟುಹಬ್ಬಕ್ಕೆ ಇತಿಹಾಸ ನಿರ್ಮಾಣ; ಉಜ್ಜಯಿನಿಯಲ್ಲಿ ಬೆಳಗಿದ 33 ಲಕ್ಷ ದೀಪ, ಮಧ್ಯಪ್ರದೇಶದಲ್ಲಿ 3.55 ಕೋಟಿ ದೀಪ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಹಾಗೂ ಅವರ ಸಾರ್ವಜನಿಕ ಸೇವೆಯ 25ನೇ ವರ್ಷದ ನೆನಪಿಗಾಗಿ ಬಿಜೆಪಿ ಹಮ್ಮಿಕೊಂಡಿರುವ 'ಸೇವಾ ಸಂಕಲ್ಪ ಅಭಿಯಾನ'ದ ಭಾಗವಾಗಿ, ಮಧ್ಯಪ್ರದೇಶದ ಪವಿತ್ರ ಧಾರ್ಮಿಕ ನಗರ ಉಜ್ಜಯಿನಿಯ ಶಿಪ್ರಾ ನದಿ ದಂಡೆಯಲ್ಲಿ ಇಂದು ಸಂಜೆ 'ಆಶೀರ್ವಾದ ಕಾ ದಿಯಾ' ಭವ್ಯ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ 33.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲಾಯಿತು. ಉಜ್ಜಯಿನಿಯ ಪ್ರಸಿದ್ಧ ರಾಮ್ ಘಾಟ್ ಸೇರಿದಂತೆ ಶಿಪ್ರಾ ನದಿಯ ವಿವಿಧ ಘಾಟ್‌ಗಳು ಮತ್ತು ಶ್ರೀ ಮಹಾಕಾಲ್ ಲೋಕ ಪ್ರದೇಶದಲ್ಲಿ ಏಕಕಾಲಕ್ಕೆ 33 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಬೆಳಗಿದವು.

ಮೋದಿ ಹುಟ್ಟುಹಬ್ಬಕ್ಕೆ ಇತಿಹಾಸ ನಿರ್ಮಾಣ; ಉಜ್ಜಯಿನಿಯಲ್ಲಿ ಬೆಳಗಿದ 33 ಲಕ್ಷ ದೀಪ, ಮಧ್ಯಪ್ರದೇಶದಲ್ಲಿ 3.55 ಕೋಟಿ ದೀಪ!
ಉಜ್ಜಯಿನಿಯಲ್ಲಿ ಬೆಳಗಿದ 33 ಲಕ್ಷ ದೀಪImage Credit source: TV9
ಸುಷ್ಮಾ ಚಕ್ರೆ
|

Updated on: Sep 17, 2026 | 10:43 PM

Share

ಉಜ್ಜಯಿನಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಉಜ್ಜಯಿನಿಯಲ್ಲಿ 33.23 ಲಕ್ಷ ದೀಪಗಳ ದೀಪೋತ್ಸವ ನೆರವೇರಿಸುವ ಮೂಲಕ ‘ವಿಶ್ವ ದಾಖಲೆ’ ನಿರ್ಮಿಸಲಾಗಿದೆ. ಮಧ್ಯಪ್ರದೇಶದಾದ್ಯಂತ 3.55 ಕೋಟಿ ದೀಪಗಳನ್ನು ಬೆಳಗಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೭೬ ನೇ ಜನ್ಮದಿನದ ಸವಿನೆನಪಿಗಾಗಿ ಮಧ್ಯಪ್ರದೇಶದ ಪವಿತ್ರ ನಗರ ಉಜ್ಜಯಿನಿಯ ಶಿಪ್ರಾ ನದಿಯ ವಿವಿಧ ಘಾಟ್‌ಗಳಲ್ಲಿ ಏಕಕಾಲಕ್ಕೆ ಬರೋಬ್ಬರಿ 33.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಭವ್ಯ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ.

ಉಜ್ಜಯಿನಿಯ ಐತಿಹಾಸಿಕ ರಾಮ್ ಘಾಟ್, ದತ್ ಅಖಾಡ ಘಾಟ್ ಮತ್ತು ಸಿದ್ಧವಟ ಪ್ರದೇಶಗಳಲ್ಲಿ ‘ಆಶೀರ್ವಾದ ಕಾ ದಿಯಾ’ ಶೀರ್ಷಿಕೆಯಡಿ ಏಕಕಾಲದಲ್ಲಿ 33.23 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಗಿನ್ನೆಸ್ ಬುಕ್ ಮತ್ತು ವಿಶ್ವ ದಾಖಲೆಗಳ ಪ್ರತಿನಿಧಿಗಳು ಸ್ಥಳದಲ್ಲಿದ್ದು ಪರಿಶೀಲಿಸಿ ಹೊಸ ದಾಖಲೆಯನ್ನು ದೃಢಪಡಿಸಿದ್ದಾರೆ.

ರಾಜ್ಯಾದ್ಯಂತ 3.55 ಕೋಟಿ ದೀಪೋತ್ಸವ:

ಉಜ್ಜಯಿನಿ ನಗರ ಮಾತ್ರವಲ್ಲದೆ ಭೋಪಾಲ್, ಇಂದೋರ್, ಜಬಲ್ಪುರ್, ಗ್ವಾಲಿಯರ್ ಸೇರಿದಂತೆ ಮಧ್ಯಪ್ರದೇಶದ ಪ್ರತಿಯೊಂದು ಗ್ರಾಮ, ಪಂಚಾಯಿತಿ, ನಗರ ಪ್ರಾಧಿಕಾರ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಒಟ್ಟು 3.55 ಕೋಟಿ ದೀಪಗಳನ್ನು ಹಚ್ಚಿ ದೀಪಾವಳಿಯಂತಹ ವಾತಾವರಣವನ್ನು ನಿರ್ಮಿಸಲಾಯಿತು. ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ರಾಮ್ ಘಾಟ್‌ನಲ್ಲಿ ಶಿಪ್ರಾ ನದಿ ಆರತಿ ನೆರವೇರಿಸಿ, ಪವಿತ್ರ ಜಲಕ್ಕೆ ದೀಪ ಬಿಡುವ ಮೂಲಕ ಈ ದೀಪೋತ್ಸವಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಜನ್ಮದಿನ:ಕಾಶಿಯಿಂದ ವಡ್ನಗರದವರೆಗೆ ‘ಸೇವಾ ಸಂಕಲ್ಪ’ ಮೆಗಾ ಬೈಕ್ ಯಾತ್ರೆ, 25 ವರ್ಷಗಳ ಸಾರ್ವಜನಿಕ ಸೇವೆಗೆ ವಿಶೇಷ ಗೌರವ

35 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರ ಶ್ರಮ:

ಈ ಬೃಹತ್ ಕಾರ್ಯಕ್ರಮಕ್ಕಾಗಿ ಸುಮಾರು 35,000ಕ್ಕೂ ಹೆಚ್ಚು ಸ್ವಯಂಸೇವಕರು, ಎನ್‌ಸಿಸಿ ಕೆಡೆಟ್‌ಗಳು ಮತ್ತು ಸ್ಥಳೀಯ ನಾಗರಿಕರು ಕೈಜೋಡಿಸಿದ್ದರು. ಕೇವಲ 15 ನಿಮಿಷಗಳಲ್ಲಿ ಎಲ್ಲಾ ದೀಪಗಳನ್ನು ಬೆಳಗಿಸಿ ನದಿ ದಂಡೆಯನ್ನು ಪೂರ್ಣವಾಗಿ ಪ್ರಜ್ವಲಿಸುವಂತೆ ಮಾಡಲಾಯಿತು. ಮಧ್ಯಪ್ರದೇಶ ಸರ್ಕಾರ ಮತ್ತು ಬಿಜೆಪಿ ಹಮ್ಮಿಕೊಂಡಿರುವ ತಿಂಗಳ ಅವಧಿಯ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ ಈ ಐತಿಹಾಸಿಕ ದೀಪೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ