AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಸಹಾಯಕ್ಕೆ ಅಂಗಲಾಚುವಂತೆ ಮಾಡಿದ್ದ ಆರೋಪಿಗಳ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುವಂತೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋವೊಂದರಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಆಟೋ ಚಾಲಕ ಸೇರಿದಂತೆ ಇತರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಸಂತ್ರಸ್ತೆ ಜೀವನ್ ಖೇರಿಯಲ್ಲಿ ಆಟೋ ಹತ್ತಿದ್ದಾಳೆ, ಅದರ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ ಎಂದು ಹೇಳಿದರು.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಸಹಾಯಕ್ಕೆ ಅಂಗಲಾಚುವಂತೆ ಮಾಡಿದ್ದ ಆರೋಪಿಗಳ ಬಂಧನ
ಬಾಲಕಿ
ನಯನಾ ರಾಜೀವ್
|

Updated on: Sep 28, 2023 | 10:42 AM

Share

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುವಂತೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋವೊಂದರಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಆಟೋ ಚಾಲಕ ಸೇರಿದಂತೆ ಇತರೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಸಂತ್ರಸ್ತೆ ಜೀವನ್ ಖೇರಿಯಲ್ಲಿ ಆಟೋ ಹತ್ತಿದ್ದಾಳೆ, ಅದರ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ ಎಂದು ಹೇಳಿದರು.

ಆಟೋ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ, ಆಟೋ ವಿಧಿವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಮೂವರಲ್ಲಿ ಒಬ್ಬರು ಆಟೋ ಚಾಲಕರಾಗಿದ್ದಾರೆ. ಅತ್ಯಾಚಾರವೆಸಗಿ ಆಕೆಯನ್ನು ಎಲ್ಲೋ ಎಸೆದು ಪರಾರಿಯಾಗಿದ್ದರು, ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಸಹಾಯ ಬೇಡುತ್ತಾ 8 ಕಿ.ಮೀ ನಡೆದುಕೊಂಡು ಬಂದಿದ್ದಳು.

12 ವರ್ಷದ ಬಾಲಕಿಗೆ ವೈದ್ಯರ ತಂಡವು ಶಸ್ತ್ರಚಿಕಿತ್ಸೆ ಮಾಡಿದೆ ಮತ್ತು ಆಕೆಯ ಸ್ಥಿತಿ ಗಂಭೀರವಾಗಿದೆ, ಆದರೆ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಬಾಲಕಿ ಅನುಭವಿಸಿದ ಭಯಾನಕ ಸ್ಥಿತಿಯನ್ನು ಅರ್ಚಕರೊಬ್ಬರು ವಿವರಿಸಿದ್ದಾರೆ. ರಾಹುಲ್ ಶರ್ಮಾ ಉಜ್ಜಯಿನಿ ನಗರದಿಂದ ಸುಮಾರು 15 ಕಿಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಆಶ್ರಮದವರು.

ಮತ್ತಷ್ಟು ಓದಿ: ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ

ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ಯಾವುದೋ ಕೆಲಸದ ನಿಮಿತ್ತ ಆಶ್ರಮದಿಂದ ಹೊರ ಹೋಗುತ್ತಿದ್ದಾಗ ಗೇಟ್ ಬಳಿ ಅರೆಬೆತ್ತಲೆಯಾಗಿ ರಕ್ತಸ್ರಾವವಾಗುತ್ತಿದ್ದ ಬಾಲಕಿಯನ್ನು ಕಂಡಿದ್ದಾರೆ. ಆಕೆಗೆ ಬಟ್ಟೆ ಕೊಟ್ಟೆ, ಬಾಲಕಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ, ಕಣ್ಣುಗಳು ಊದಿಕೊಂಡಿದ್ದವು, ತಕ್ಷಣ ಪೊಲೀಸರಿಗೆ ಕರೆ ಮಾಡಿದೆ, ಪೊಲೀಸರು 20 ನಿಮಿಷಗಳ ಬಳಿಕ ಅಲ್ಲಿಗೆ ತಲುಪಿದ್ದಾರೆ ಎಂದಿದ್ದಾರೆ.

ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಅರೆಬೆತ್ತಲಾಗಿ ಮನೆ ಮನೆಯ ಬಳಿ ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ಕೂಡ ಮಾನವೀಯತೆ ತೋರಲಿಲ್ಲ, ಸಹಾಯಕ್ಕೆ ಬರಲಿಲ್ಲ, ಇದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಾಲಕಿ ಯಾವುದೋ ಸ್ಥಳದ ಬಗ್ಗೆ ಮಾತನಾಡುತ್ತಿದ್ದಳು, ಆದರೆ ಆ ಸ್ಥಳವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅರ್ಚಕರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು