AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ರಿಷಿ ಸುನಕ್Image Credit source: Mint
ನಯನಾ ರಾಜೀವ್
|

Updated on: Sep 10, 2023 | 11:33 AM

Share

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಭಾರತ ಮಂಟಪದಲ್ಲಿ ಜಿ20 ಶೃಂಗಸಭೆಯ ಮೂರನೇ ಅಧಿವೇಶನ ನಡೆಯುತ್ತಿದೆ. ಒನ್ ಫ್ಯೂಚರ್ ವಿಚಾರವನ್ನು ಶೃಂಗಸಭೆಯಲ್ಲಿ ಚರ್ಚಿಸಲಾಗುತ್ತಿದೆ. ‘ಒನ್ ಫ್ಯೂಚರ್’ ಅಧಿವೇಶನದ ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದರೊಂದಿಗೆ ಮೂರನೇ ಅಧಿವೇಶನವೂ ಪೂರ್ಣಗೊಳ್ಳಲಿದೆ.

ಈ ದೇಶಗಳೆಂದರೆ- ಫ್ರಾನ್ಸ್, ಟರ್ಕಿ, ಯುಎಇ, ದಿ. ಕೊರಿಯಾ, ಬ್ರೆಜಿಲ್, ನೈಜೀರಿಯಾ, ಕೊಮೊರೊಸ್ ಮತ್ತು ಯುರೋಪಿಯನ್ ಕಮಿಷನ್. ಇದಾದ ನಂತರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಧ್ಯಾಹ್ನ 2.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿ ಅಂತರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿರುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ಜಿ 20 ಶೃಂಗಸಭೆಯ ಮೊದಲ ದಿನದ ಭೋಜನದ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಸಂಭಾಷಣೆ ನಡೆಯಿತು. ಉಭಯ ನಾಯಕರು ಪರಸ್ಪರ ಹಿತಾಸಕ್ತಿ ಮತ್ತು ಉಭಯ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಮಾಹಿತಿಯನ್ನು ಹಣಕಾಸು ಸಚಿವಾಲಯ ನೀಡಿದೆ. ಜಿ20 ನಾಯಕರು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?