ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ರಿಷಿ ಸುನಕ್
Image Credit source: Mint

Updated on: Sep 10, 2023 | 11:33 AM

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಭಾರತ ಮಂಟಪದಲ್ಲಿ ಜಿ20 ಶೃಂಗಸಭೆಯ ಮೂರನೇ ಅಧಿವೇಶನ ನಡೆಯುತ್ತಿದೆ. ಒನ್ ಫ್ಯೂಚರ್ ವಿಚಾರವನ್ನು ಶೃಂಗಸಭೆಯಲ್ಲಿ ಚರ್ಚಿಸಲಾಗುತ್ತಿದೆ. ‘ಒನ್ ಫ್ಯೂಚರ್’ ಅಧಿವೇಶನದ ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದರೊಂದಿಗೆ ಮೂರನೇ ಅಧಿವೇಶನವೂ ಪೂರ್ಣಗೊಳ್ಳಲಿದೆ.

ಈ ದೇಶಗಳೆಂದರೆ- ಫ್ರಾನ್ಸ್, ಟರ್ಕಿ, ಯುಎಇ, ದಿ. ಕೊರಿಯಾ, ಬ್ರೆಜಿಲ್, ನೈಜೀರಿಯಾ, ಕೊಮೊರೊಸ್ ಮತ್ತು ಯುರೋಪಿಯನ್ ಕಮಿಷನ್. ಇದಾದ ನಂತರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಧ್ಯಾಹ್ನ 2.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿ ಅಂತರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿರುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ಜಿ 20 ಶೃಂಗಸಭೆಯ ಮೊದಲ ದಿನದ ಭೋಜನದ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಸಂಭಾಷಣೆ ನಡೆಯಿತು. ಉಭಯ ನಾಯಕರು ಪರಸ್ಪರ ಹಿತಾಸಕ್ತಿ ಮತ್ತು ಉಭಯ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಮಾಹಿತಿಯನ್ನು ಹಣಕಾಸು ಸಚಿವಾಲಯ ನೀಡಿದೆ. ಜಿ20 ನಾಯಕರು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us