AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ಭೇಟಿಕೊಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ

ಜಿ20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಇಂದು ಅಕ್ಷರಧಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಿಷಿ ದಂಪತಿ ಸುಮಾರು 45 ನಿಮಿಷಗಳ ಕಾಲ ದೇವಸ್ಥಾನದಲ್ಲಿಯೇ ಇರಲಿದ್ದಾರೆ, ಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಈ ಪ್ರದೇಶಗಳಲ್ಲಿ ಬ್ಯಾರಿಕೇಡ್​ಗಳನ್ನು ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ದೃಷ್ಟಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ಭೇಟಿಕೊಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ
ರಿಷಿ ಸುನಕ್
Follow us
ನಯನಾ ರಾಜೀವ್
|

Updated on:Sep 10, 2023 | 9:50 AM

ಜಿ20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak) ದಂಪತಿ ಇಂದು ಅಕ್ಷರಧಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಿಷಿ ದಂಪತಿ ಸುಮಾರು 45 ನಿಮಿಷಗಳ ಕಾಲ ದೇವಸ್ಥಾನದಲ್ಲಿಯೇ ಇರಲಿದ್ದಾರೆ, ಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಈ ಪ್ರದೇಶಗಳಲ್ಲಿ ಬ್ಯಾರಿಕೇಡ್​ಗಳನ್ನು ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ದೃಷ್ಟಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ‘ಹಿಂದೂ’ ಬೇರುಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ರಿಷಿ ಸುನಕ್, ಜಿ20 ಶೃಂಗಸಭೆಯ ನಡುವೆ ಭಾರತದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಸಮಯ ಸಿಗಬಹುದು ಎಂದು ಶನಿವಾರ ಭರವಸೆ ವ್ಯಕ್ತಪಡಿಸಿದ್ದರು. ಸುನಕ್ ದೇವಸ್ಥಾನದಲ್ಲಿ 1 ಗಂಟೆ ಇರುತ್ತಾರೆ ಎಂದು ಹೇಳಲಾಗುತ್ತಿದೆ.

ದೇವಾಲಯದ ಸುತ್ತಲೂ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದ್ದು, ಹಲವಾರು ಪೊಲೀಸ್ ಅಧಿಕಾರಿಗಳನ್ನು ಅಲ್ಲಿ ನಿಯೋಜಿಸಲಾಗಿದೆ. ಶುಕ್ರವಾರ, ರಕ್ಷಾ ಬಂಧನವನ್ನು ಆಚರಿಸಿದೆವು, ಆದರೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಾಧ್ಯವಾಗಲಿಲ್ಲ ಹಾಗಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ಶನಿವಾರ ಸುನಕ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಕಷ್ಟು ಹೊಗಳಿದ್ದರು .

ಹಿಂದೂ ಎಂಬ ಅಭಿಮಾನ ವ್ಯಕ್ತಪಡಿಸಿದ ರಿಷಿ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಿ ಸುನಕ್, ನಾನು ಹಿಂದೂ ಎಂದು ಹೆಮ್ಮೆಪಡುತ್ತೇನೆ. ಇದು ನನ್ನನ್ನು ಬೆಳೆಸಿದ ರೀತಿ ಮತ್ತು ನಾನು ಹೀಗೆಯೇ ಇದ್ದೇನೆ.

ಮತ್ತಷ್ಟು ಓದಿ: ಭಾನುವಾರ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಈ ದೇವಾಲಯದ ವಿಶೇಷತೆ ಏನು? ಅಕ್ಷರಧಾಮ ದೇವಾಲಯವು ಸ್ವಾಮಿನಾರಾಯಣನ ದೇವಾಲಯವಾಗಿದೆ. ಇದು ಸಾಹಿತ್ಯಿಕ-ಸಾಂಸ್ಕೃತಿಕ ಸ್ಥಳವಾಗಿದೆ. ಈ ದೇವಾಲಯವನ್ನು ಸ್ವಾಮಿನಾರಾಯಣ ಅಕ್ಷರಧಾಮ ಎಂದೂ ಕರೆಯುತ್ತಾರೆ.

ಲಕ್ಷಾಂತರ ಹಿಂದೂ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾಕೃತಿಗಳ ಆಕರ್ಷಕ ನೋಟವನ್ನು ಈ ದೇವಾಲಯದಲ್ಲಿ ಕಾಣಬಹುದು. ಯಮುನಾ ನದಿಯ ದಡದಲ್ಲಿರುವ ಈ ದೇವಾಲಯವನ್ನು ವಾಸ್ತು ಶಾಸ್ತ್ರ ಮತ್ತು ಪಂಚರಾತ್ರ ಶಾಸ್ತ್ರದ ಪ್ರಕಾರ ನಿರ್ಮಿಸಲಾಗಿದೆ.

ಇಲ್ಲಿ ಅಭಿಷೇಕ ಮಂಟಪ, ಸಹಜ್ ಆನಂದ್ ವಾಟರ್ ಶೋ, ಥೀಮ್ ಗಾರ್ಡನ್ ಮತ್ತು ಮೂರು ಪ್ರದರ್ಶನಗಳು (ಸಹಜ್ ಆನಂದ ದರ್ಶನ, ನೀಲಕಂಠ ದರ್ಶನ ಮತ್ತು ಸಂಸ್ಕೃತಿ ದರ್ಶನ) ಜನರನ್ನು ಆಕರ್ಷಿಸುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:27 am, Sun, 10 September 23

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ