AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಮ್ಮೆಲೇ ಇಲ್ಲಿನ ಕಾಲೇಜುಗಳಲ್ಲಿ ಪ್ರವೇಶಾತಿ ನೀಡಲು ಸಾಧ್ಯವೇ ಇಲ್ಲ

ಉಕ್ರೇನ್​ನಿಂದ ಶಿಕ್ಷಣ ಅರ್ಧ ಪಡೆದು ವಾಪಸ್​ ಬಂದಿರುವ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಮಾಡಲು, ಅವರಿಗೆ ಪ್ರವೇಶ ನೀಡುವ ವಿಚಾರದಲ್ಲಿ ವಿಶ್ವವಿದ್ಯಾಲಯಗಳು ಏಕಮುಖವಾಗಿ ಅಥವಾ ಪ್ರತ್ಯೇಕ ನಿರ್ಧಾರ ಕೈಗೊಳ್ಳಲು ಸಾಧ್ಯವೇ ಇಲ್ಲ ಎಂದು ಡಾ. ಮಾಧುರಿ ಕಾನಿಟ್ಕರ್ ಹೇಳಿದ್ದಾರೆ.

ಉಕ್ರೇನ್​​ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಮ್ಮೆಲೇ ಇಲ್ಲಿನ ಕಾಲೇಜುಗಳಲ್ಲಿ ಪ್ರವೇಶಾತಿ ನೀಡಲು ಸಾಧ್ಯವೇ ಇಲ್ಲ
ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳು
TV9 Web
| Edited By: |

Updated on:Mar 09, 2022 | 9:26 AM

Share

ಉಕ್ರೇನ್​​ನಿಂದ (Ukraine) ಇದೀಗ ವಾಪಸ್​ ಬಂದಿರುವ ಭಾರತದ ವಿದ್ಯಾರ್ಥಿಗಳಿಗೆ, ಅವರ ಶಿಕ್ಷಣ ಮುಂದುವರಿಸಲು ಒಮ್ಮೆಲೇ ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಸಿಗುವುದಿಲ್ಲ ಎಂದು ನಾಸಿಕ್ ಮೂಲದ ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (MUHS) ಉಪಕುಲಪತಿ ಡಾ. ಮಾಧುರಿ ಕಾನಿಟ್ಕರ್​ (ನಿವೃತ್ತ ಲೆಫ್ಟಿನೆಂಟ್ ಜನರಲ್​) ತಿಳಿಸಿದ್ದಾರೆ. ಆದರೆ ಅವರ ಕಲಿಕೆಯನ್ನು ಮುಂದುವರಿಸಲು ಹೇಗೆಲ್ಲ ಆಯ್ಕೆಗಳಗಳನ್ನು ನೀಡಬಹುದು ಎಂಬುದನ್ನು ಶಿಕ್ಷಣ ಕ್ಷೇತ್ರದ ಅಧಿಕಾರಿಗಳು ಅನ್ವೇಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​ನಿಂದ ಸಾವಿರಾರು ವಿದ್ಯಾರ್ಥಿಗಳು ವಾಪಸ್​ ಬಂದಿದ್ದಾರೆ. ಆದರೆ ನಮ್ಮ ಕಾಲೇಜುಗಳಲ್ಲಿ ಅವರಿಗೆ ತತ್​ಕ್ಷಣವೇ ಪ್ರವೇಶ ಕಲ್ಪಿಸಲು ಸಾಧ್ಯವೇ ಇಲ್ಲ. ಭಾರತದ ವೈದ್ಯಕೀಯ ಕಾಲೇಜುಗಳಿಗೆ ಮೆರಿಟ್​ ಆಧಾರದಲ್ಲಿ ಪ್ರವೇಶ ಪಡೆದವರು ಇದ್ದಾರೆ. ಇಲ್ಲಿಯದೇ ಆದ ನಿಯಮಗಳು ಇವೆ. ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಆ ನಿಯಮಗಳನ್ನು ಸಡಿಲಗೊಳಿಸಲು ಸಾಧ್ಯವಿಲ್ಲ. ಇನ್ನು ಉಕ್ರೇನ್​ನಿಂದ ಈಗ ಹಿಂದಿರುಗಿರುವ ವಿದ್ಯಾರ್ಥಿಗಳು ಅಲ್ಲಿನ ಯೂನಿರ್ವಸಿಟಿಗಳಲ್ಲಿ ಕಲಿತವರು. ಅಲ್ಲಿ ಪಠ್ಯಕ್ರಮ, ಬೋಧನಾ ವಿಧಾನಗಳಲ್ಲೆ ವಿಭಿನ್ನವಾಗಿದೆ. ಹಾಗಿದ್ದಾಗ್ಯೂ ಆ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಮತ್ತೆ ಏನಾದರೂ ವ್ಯವಸ್ಥೆ ಮಾಡುವವರೆಗೆ ಅವರ ಶಿಕ್ಷಣಕ್ಕೆ ಅನುಕೂಲವಾಗುವಂತೆ ನಾವೇನಾದರೂ ಮಾಡಬಹುದಾ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಡಾ. ಕಾನಿಟ್ಕರ್ ತಿಳಿಸಿದ್ದಾರೆ.

ಉಕ್ರೇನ್​ನಿಂದ ಶಿಕ್ಷಣ ಅರ್ಧ ಪಡೆದು ವಾಪಸ್​ ಬಂದಿರುವ ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಮಾಡಲು, ಅವರಿಗೆ ಪ್ರವೇಶ ನೀಡುವ ವಿಚಾರದಲ್ಲಿ ವಿಶ್ವವಿದ್ಯಾಲಯಗಳು ಏಕಮುಖವಾಗಿ ಅಥವಾ ಪ್ರತ್ಯೇಕ ನಿರ್ಧಾರ ಕೈಗೊಳ್ಳಲು ಸಾಧ್ಯವೇ ಇಲ್ಲ. ಸಮಸ್ಯೆ ಪರಿಹಾರ ಮಾಡಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಒಂದಷ್ಟು ಮಾರ್ಗಗಳನ್ನು ಕಂಡುಕೊಳ್ಳುತ್ತಿದೆ. ಉಕ್ರೇನ್​ನಿಂದ ಬಂದಿರುವವರಲ್ಲಿ ತಮ್ಮ ಶಿಕ್ಷಣದ ಬಗ್ಗೆ ಆತಂಕ ಇದ್ದೇ ಇರುತ್ತದೆ. ಅದನ್ನು ಪರಿಹರಿಸುವ ದೃಷ್ಟಿಯಿಂದ ನಾವೆಲ್ಲ ಪ್ರಯತ್ನ ಮಾಡುತ್ತಿದ್ದು, ಏನು ಸಾಧ್ಯವೋ ಅದನ್ನು ಆದಷ್ಟು ಬೇಗ ಮಾಡುತ್ತೇವೆ ಎಂದು ಡಾ. ಮಾಧುರಿ ತಿಳಿಸಿದ್ದಾರೆ. ಇನ್ನು ನಾವು ಈಗಾಗಲೇ ಮಹಾರಾಷ್ಟ್ರ ಯೂನಿವರ್ಸಿಟಿ ಆಫ್​ ಹೆಲ್ತ್​ ಸೈನ್ಸ್ ವೆಬ್​ಸೈಟ್​​ನಲ್ಲಿ ಒಂದು ಫಾರ್ಮ್​ ಬಿಡುಗಡೆ ಮಾಡಿದ್ದೇವೆ ಮತ್ತು ಈ ವಿಚಾರದಲ್ಲಿ ಏನೆಲ್ಲ ಮಾಡಬಹುದು ಎಂಬುದನ್ನು ತಿಳಿಸುವಂತೆ ಕೇಳಿದ್ದೇವೆ. ಈಗಾಗಲೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಈಗ ಎಷ್ಟು ವಿದೇಶಿಗರು ವಾಸಿಸುತ್ತಿದ್ದಾರೆ ಗೊತ್ತಾ? ಯಾವ ದೇಶದ ಪ್ರಜೆಗಳು ಇಲ್ಲಿ ಹೆಚ್ಚಿದ್ದಾರೆ?

Published On - 9:13 am, Wed, 9 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು