AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

ಈ ಮಧ್ಯೆ ವಿದ್ಯಾರ್ಥಿಗಳ ಪಾಲಕರೂ ಕೂಡ ಬೇಡಿಕೆ ಇಡುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಮಕ್ಕಳ ಜೀವ ಕಾಪಾಡಿದೆ. ಹಾಗೇ, ಅವರ ಶಿಕ್ಷಣ ಮುಂದುವರಿಯಲು ಸಹಾಯ ಮಾಡಿ, ಭವಿಷ್ಯವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ನಮ್ಮ ಶಿಕ್ಷಣ ಮುಂದುವರಿಸಲು ದಾರಿ ಮಾಡಿಕೊಡಿ; ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ
ವಿದ್ಯಾರ್ಥಿಗಳ ಪ್ರತಿಭಟನೆ
TV9 Web
| Edited By: |

Updated on: Apr 17, 2022 | 9:16 PM

Share

ಯುದ್ಧ ಪೀಡಿತ ಉಕ್ರೇನ್​ನಿಂದ ಭಾರತಕ್ಕೆ ಬಂದ ಅನೇಕ ವಿದ್ಯಾರ್ಥಿಗಳು ದೆಹಲಿಯ ಜಂತರ್​-ಮಂತರ್​​ನಲ್ಲಿ ಒಟ್ಟಿಗೇ ಸೇರಿ, ತಮಗೆ ಭಾರತೀಯ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ನೀಡಬೇಕು. ಅರ್ಧಕ್ಕೆ ನಿಂತ ವೃತ್ತಿಯನ್ನು ಮುಂದುವರಿಸಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.  ಉಕ್ರೇನ್​ನಲ್ಲಿ ಭಾರತದ ಅನೇಕ ವಿದ್ಯಾರ್ಥಿಗಳು ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದರು. ಆದರೆ ಫೆ.24ರಿಂದ ರಷ್ಯಾ ಯುದ್ಧ ಶುರು ಮಾಡಿತು. ಅಲ್ಲಿ ವಸತಿ, ಆಹಾರ, ಶಿಕ್ಷಣಕ್ಕೆಲ್ಲ ಸಮಸ್ಯೆಯಾಯಿತು. ಜೀವ ಉಳಿಸಿಕೊಳ್ಳಲೂ ಕಷ್ಟಪಡುವ ಪರಿಸ್ಥಿತಿ ಈ ವಿದ್ಯಾರ್ಥಿಗಳಿಗೆ ಬಂದೊದಗಿತು.  ಆ ಸಂದರ್ಭದಲ್ಲಿ ಅವರ ಕೈ ಹಿಡಿದಿದ್ದು ಭಾರತದ ಸರ್ಕಾರ. ಆಪರೇಶನ್​ ಗಂಗಾ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ, ಎಲ್ಲ ವಿದ್ಯಾರ್ಥಿಗಳನ್ನೂ ಭಾರತಕ್ಕೆ ಕರೆತಂದಿದೆ. ಅವರು ಭಾರತಕ್ಕೇನೋ ಬಂದಿದ್ದಾರೆ. ಆದರೆ ಅಲ್ಲಿ ಅರ್ಧಕ್ಕೆ ಮೊಟಕುಗೊಂಡ ಶಿಕ್ಷಣ ಮುಂದುವರಿಸುವುದು ಅವರಿಗೆ ಈಗ ಸಮಸ್ಯೆಯಾಗಿದೆ. ಕೆಲವು ರಾಜ್ಯಗಳು ತಾವು ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಹೇಳಿಕೊಂಡಿದ್ದರೂ, ಕೇಂದ್ರ ಸರ್ಕಾರ ಮುಂದಾಗಿ ಒಂದು ನಿಯಮ ತರಬೇಕು ಎಂಬುದು ಸದ್ಯ ಕೇಳಿಬರುತ್ತಿರುವ ಬೇಡಿಕೆ.

ಈ ಮಧ್ಯೆ ವಿದ್ಯಾರ್ಥಿಗಳ ಪಾಲಕರೂ ಕೂಡ ಬೇಡಿಕೆ ಇಡುತ್ತಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಮಕ್ಕಳ ಜೀವ ಕಾಪಾಡಿದೆ. ಹಾಗೇ, ಅವರ ಶಿಕ್ಷಣ ಮುಂದುವರಿಯಲು ಸಹಾಯ ಮಾಡಿ, ಭವಿಷ್ಯವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಉಕ್ರೇನ್​ನಿಂದ ಪಶ್ಚಿಮ ಬಂಗಾಳಕ್ಕೆ ಅನೇಕ ವಿದ್ಯಾರ್ಥಿಗಳು ಬಂದಿದ್ದಾರೆ. ಹಾಗೇ, ಇನ್ನಿತರ ರಾಜ್ಯಗಳಿಗೂ ವಾಪಸ್ ಆಗಿದ್ದಾರೆ. ಅವರಿಗೆಲ್ಲ ಇಲ್ಲಿನ ಕಾಲೇಜುಗಳಲ್ಲಿ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಲು ಕ್ರಮ ಕೈಗೊಳ್ಳಿ ಎಂದು ಹೇಳಿದ್ದರು. ಸದ್ಯ ಈ ಬಗ್ಗೆಯೇ ಚರ್ಚೆಯಾಗುತ್ತಿದೆ. ಉಕ್ರೇನ್​ನಲ್ಲಿ ಶಿಕ್ಷಣ ಕ್ರಮ ಬೇರೆಯಾಗಿರುತ್ತದೆ. ಹೀಗಾಗಿ ಅಲ್ಲಿಂದ ಬಂದವರಿಗೆ ಒಮ್ಮೆಲೇ ಇಲ್ಲಿ ಅವಕಾಶ ಕೊಡುವುದು ಕಷ್ಟ ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯ.

ಇದನ್ನೂ ಓದಿ: ಕಾನೂನು, ಸಂವಿಧಾನ ನಮಗಲ್ಲ ಅಂದ್ರೆ, ಅವರು ಈ ದೇಶದ ನಾಗರಿಕರಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ