AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿರುವ ನನ್ನ ಹೆತ್ತವರ ಬಗ್ಗೆ ಚಿಂತೆಯಾಗುತ್ತಿದೆ, ಪ್ಲೀಸ್ ಯುದ್ಧ ನಿಲ್ಲಿಸಿ; ಪ್ರಧಾನಿ ಮೋದಿಗೆ ಮನವಿ ಮಾಡಿದ ಕಾಶ್ಮೀರದ ಸೊಸೆ

ಇವರ ಮೂಲ ಹೆಸರು ಅಲಿಜಾ ಎಂದಾಗಿದ್ದು, ಉಕ್ರೇನ್​ನವರು. ಟ್ರಾಲ್​​ ಯುವಕನನ್ನು ಮದುವೆಯಾಗಿ, ಇಸ್ಲಾಂಗೆ ಮತಾಂತರಗೊಂಡಿದ್ದು, ಇಲ್ಲಿಯೇ ಇದ್ದಾರೆ. ಹೆಸರನ್ನು ಆಸಿಯಾ ಎಂದು ಬದಲಿಸಿಕೊಂಡಿರುವ ಇವರೀಗ ಇಬ್ಬರು ಮಕ್ಕಳ ತಾಯಿ.

ಉಕ್ರೇನ್​​ನಲ್ಲಿರುವ ನನ್ನ ಹೆತ್ತವರ ಬಗ್ಗೆ ಚಿಂತೆಯಾಗುತ್ತಿದೆ, ಪ್ಲೀಸ್ ಯುದ್ಧ ನಿಲ್ಲಿಸಿ; ಪ್ರಧಾನಿ ಮೋದಿಗೆ ಮನವಿ ಮಾಡಿದ ಕಾಶ್ಮೀರದ ಸೊಸೆ
ಯುದ್ಧ ನಿಲ್ಲಿಸಿ ಎಂದು ಮನವಿ ಮಾಡುತ್ತಿರುವ ಮಹಿಳೆ (ಮಗುವನ್ನು ಎತ್ತಿಕೊಂಡಿರುವವರು)
TV9 Web
| Edited By: |

Updated on: Mar 05, 2022 | 8:53 AM

Share

ಉಕ್ರೇನ್​​ನಲ್ಲಿ ರಷ್ಯಾ (Russia-Ukraine War) ಪ್ರಾರಂಭಿಸಿರುವ ಯುದ್ಧ ಸದ್ಯಕ್ಕಂತೂ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಯುದ್ಧ ನಿಲ್ಲಿಸುವಂತೆ ಯಾರೆಷ್ಟೇ ರಷ್ಯಾಕ್ಕೆ ಆಗ್ರಹ, ಮನವಿ ಮಾಡಿದರೂ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಕಿವಿಗೊಡುತ್ತಿಲ್ಲ. ಇನ್ನೊಂದೆಡೆ, ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಕೂಡ ತಾವು ರಷ್ಯಾಕ್ಕೆ ತಲೆಬಾಗುವ ಪ್ರಶ್ನೆಯೇ ಇಲ್ಲ ಎಂದುಬಿಟ್ಟಿದ್ದಾರೆ. ಈ ಮಧ್ಯೆ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ಟ್ರಾಲ್​​ನಲ್ಲಿ ಇರುವ ಉಕ್ರೇನಿಯನ್​ ಮಹಿಳೆಯೊಬ್ಬರು, ಹೇಗಾದರೂ ಸರಿ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಇವರ ಮೂಲ ಹೆಸರು ಅಲಿಜಾ ಎಂದಾಗಿದ್ದು, ಉಕ್ರೇನ್​ನವರು. ಟ್ರಾಲ್​​ ಯುವಕನನ್ನು ಮದುವೆಯಾಗಿ, ಇಸ್ಲಾಂಗೆ ಮತಾಂತರಗೊಂಡಿದ್ದು, ಇಲ್ಲಿಯೇ ಇದ್ದಾರೆ. ಹೆಸರನ್ನು ಆಸಿಯಾ ಎಂದು ಬದಲಿಸಿಕೊಂಡಿರುವ ಇವರೀಗ ಇಬ್ಬರು ಮಕ್ಕಳ ತಾಯಿ. ಉಕ್ರೇನ್​ನಲ್ಲಿ ನನ್ನ ಹೆತ್ತವರು ಇದ್ದಾರೆ. ಈ ಭೀಕರ ಯುದ್ಧದ ಮಧ್ಯೆ ಅವರ ಯೋಗಕ್ಷೇಮದ ಬಗ್ಗೆ ನನಗೆ ಆತಂಕವಾಗುತ್ತಿದೆ. ಹೇಗಾದರೂ ನೀವು ಮುಂದಾಗಿ ಯುದ್ಧ ನಿಲ್ಲುವಂತೆ ಮಾಡಿ ಎಂದು ಪ್ರಧಾನಿ ಮೋದಿಯವರಿಗೆ ವಿನಂತಿಸಿದ್ದಾರೆ.

ಆಸಿಯಾ ಕಾಶ್ಮೀರದ ಉದ್ಯಮಿ ಬಿಲಾಲ್​ ಅಹ್ಮದ್​​ರನ್ನು ವಿವಾಹವಾಗಿ ಐದು ವರ್ಷವಾಗಿದೆ. ಅಂದಿನಿಂದಲೂ ಟ್ರಾಲ್​ನಲ್ಲಿಯೇ ಪತಿಯೊಂದಿಗೆ ವಾಸವಾಗಿದ್ದಾರೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಷ್ಯಾ ಮತ್ತು ಉಕ್ರೇನ್​​ ಮಧ್ಯೆ ಹೇಗಾದರೂ ರಾಜಿ ಮಾಡಿಸಲು ಮುಂದಾಗಬೇಕು.  ಈ ಯುದ್ಧ ನಿಲ್ಲಲಿ ಎಂದು ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ:  ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ: ರಷ್ಯಾ ಉಕ್ರೇನ್​ ಯುದ್ಧದ ಬಗ್ಗೆ ಬಾಬಾ ವಂಗಾ ಭವಿಷ್ಯ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?