AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿರುವ ನನ್ನ ಹೆತ್ತವರ ಬಗ್ಗೆ ಚಿಂತೆಯಾಗುತ್ತಿದೆ, ಪ್ಲೀಸ್ ಯುದ್ಧ ನಿಲ್ಲಿಸಿ; ಪ್ರಧಾನಿ ಮೋದಿಗೆ ಮನವಿ ಮಾಡಿದ ಕಾಶ್ಮೀರದ ಸೊಸೆ

ಇವರ ಮೂಲ ಹೆಸರು ಅಲಿಜಾ ಎಂದಾಗಿದ್ದು, ಉಕ್ರೇನ್​ನವರು. ಟ್ರಾಲ್​​ ಯುವಕನನ್ನು ಮದುವೆಯಾಗಿ, ಇಸ್ಲಾಂಗೆ ಮತಾಂತರಗೊಂಡಿದ್ದು, ಇಲ್ಲಿಯೇ ಇದ್ದಾರೆ. ಹೆಸರನ್ನು ಆಸಿಯಾ ಎಂದು ಬದಲಿಸಿಕೊಂಡಿರುವ ಇವರೀಗ ಇಬ್ಬರು ಮಕ್ಕಳ ತಾಯಿ.

ಉಕ್ರೇನ್​​ನಲ್ಲಿರುವ ನನ್ನ ಹೆತ್ತವರ ಬಗ್ಗೆ ಚಿಂತೆಯಾಗುತ್ತಿದೆ, ಪ್ಲೀಸ್ ಯುದ್ಧ ನಿಲ್ಲಿಸಿ; ಪ್ರಧಾನಿ ಮೋದಿಗೆ ಮನವಿ ಮಾಡಿದ ಕಾಶ್ಮೀರದ ಸೊಸೆ
ಯುದ್ಧ ನಿಲ್ಲಿಸಿ ಎಂದು ಮನವಿ ಮಾಡುತ್ತಿರುವ ಮಹಿಳೆ (ಮಗುವನ್ನು ಎತ್ತಿಕೊಂಡಿರುವವರು)
TV9 Web
| Edited By: |

Updated on: Mar 05, 2022 | 8:53 AM

Share

ಉಕ್ರೇನ್​​ನಲ್ಲಿ ರಷ್ಯಾ (Russia-Ukraine War) ಪ್ರಾರಂಭಿಸಿರುವ ಯುದ್ಧ ಸದ್ಯಕ್ಕಂತೂ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಯುದ್ಧ ನಿಲ್ಲಿಸುವಂತೆ ಯಾರೆಷ್ಟೇ ರಷ್ಯಾಕ್ಕೆ ಆಗ್ರಹ, ಮನವಿ ಮಾಡಿದರೂ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ ಕಿವಿಗೊಡುತ್ತಿಲ್ಲ. ಇನ್ನೊಂದೆಡೆ, ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಕೂಡ ತಾವು ರಷ್ಯಾಕ್ಕೆ ತಲೆಬಾಗುವ ಪ್ರಶ್ನೆಯೇ ಇಲ್ಲ ಎಂದುಬಿಟ್ಟಿದ್ದಾರೆ. ಈ ಮಧ್ಯೆ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ಟ್ರಾಲ್​​ನಲ್ಲಿ ಇರುವ ಉಕ್ರೇನಿಯನ್​ ಮಹಿಳೆಯೊಬ್ಬರು, ಹೇಗಾದರೂ ಸರಿ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಇವರ ಮೂಲ ಹೆಸರು ಅಲಿಜಾ ಎಂದಾಗಿದ್ದು, ಉಕ್ರೇನ್​ನವರು. ಟ್ರಾಲ್​​ ಯುವಕನನ್ನು ಮದುವೆಯಾಗಿ, ಇಸ್ಲಾಂಗೆ ಮತಾಂತರಗೊಂಡಿದ್ದು, ಇಲ್ಲಿಯೇ ಇದ್ದಾರೆ. ಹೆಸರನ್ನು ಆಸಿಯಾ ಎಂದು ಬದಲಿಸಿಕೊಂಡಿರುವ ಇವರೀಗ ಇಬ್ಬರು ಮಕ್ಕಳ ತಾಯಿ. ಉಕ್ರೇನ್​ನಲ್ಲಿ ನನ್ನ ಹೆತ್ತವರು ಇದ್ದಾರೆ. ಈ ಭೀಕರ ಯುದ್ಧದ ಮಧ್ಯೆ ಅವರ ಯೋಗಕ್ಷೇಮದ ಬಗ್ಗೆ ನನಗೆ ಆತಂಕವಾಗುತ್ತಿದೆ. ಹೇಗಾದರೂ ನೀವು ಮುಂದಾಗಿ ಯುದ್ಧ ನಿಲ್ಲುವಂತೆ ಮಾಡಿ ಎಂದು ಪ್ರಧಾನಿ ಮೋದಿಯವರಿಗೆ ವಿನಂತಿಸಿದ್ದಾರೆ.

ಆಸಿಯಾ ಕಾಶ್ಮೀರದ ಉದ್ಯಮಿ ಬಿಲಾಲ್​ ಅಹ್ಮದ್​​ರನ್ನು ವಿವಾಹವಾಗಿ ಐದು ವರ್ಷವಾಗಿದೆ. ಅಂದಿನಿಂದಲೂ ಟ್ರಾಲ್​ನಲ್ಲಿಯೇ ಪತಿಯೊಂದಿಗೆ ವಾಸವಾಗಿದ್ದಾರೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಷ್ಯಾ ಮತ್ತು ಉಕ್ರೇನ್​​ ಮಧ್ಯೆ ಹೇಗಾದರೂ ರಾಜಿ ಮಾಡಿಸಲು ಮುಂದಾಗಬೇಕು.  ಈ ಯುದ್ಧ ನಿಲ್ಲಲಿ ಎಂದು ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ:  ರಷ್ಯಾ ಮುಂದಿನ ದಿನಗಳಲ್ಲಿ ಜಗತ್ತನ್ನೇ ಆಳಲಿದೆ: ರಷ್ಯಾ ಉಕ್ರೇನ್​ ಯುದ್ಧದ ಬಗ್ಗೆ ಬಾಬಾ ವಂಗಾ ಭವಿಷ್ಯ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!