AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Pal Murder Case: ಉಮೇಶ್ ಪಾಲ್​ ಮೇಲೆ ಗುಂಡು ಹಾರಿಸಿದ್ದ ಆರೋಪಿ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ.

Umesh Pal Murder Case: ಉಮೇಶ್ ಪಾಲ್​ ಮೇಲೆ ಗುಂಡು ಹಾರಿಸಿದ್ದ ಆರೋಪಿ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವು
ಪೊಲೀಸ್
ನಯನಾ ರಾಜೀವ್
|

Updated on: Mar 06, 2023 | 8:02 AM

Share

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿಯನ್ನು ಎನ್​ಕೌಂಟರ್​ನಲ್ಲಿ ಹತ್ಯೆಗೈಯಲಾಗಿದೆ, ಉಮೇಶ್​ ಪಾಲ್​ಗೆ ಮೊದಲು ಗುಂಡು ಹಾರಿಸಿದ್ದು ಈತನೇ ಎಂದು ಹೇಳಲಾಗುತ್ತಿದೆ. ಪ್ರಯಾಗ್​ರಾಜ್​ನ ಕೌಂಧಿಯಾರ ಪ್ರದೇಶದಲ್ಲಿ ಈ ಎನ್​ಕೌಂಟರ್​ ನಡೆದಿದೆ, ಈ ವೇಳೆ ಉಸ್ಮಾನ್ ಚೌಧರಿ ಮೇಲೆ ಗುಂಡು ಹಾರಿಸಲಾಗಿತ್ತು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಇದು ಎರಡನೇ ಎನ್​ಕೌಂಟರ್​ ಆಗಿದೆ. ಇದಕ್ಕೂ ಮುನ್ನ ಅತೀಕ್ ಅಹ್ಮದ್​ನ ಆಪ್ತ ಸಹಾಯಕ ಅರ್ಬಾಜ್​ನನ್ನು ಕೊಂದಿದ್ದರು. ಉಮೇಶ್ ಪಾಲ್ ಹತ್ಯೆಗೆ ಬಳಸಿದ್ದ ಕ್ರೆಟಾ ಕಾರ್​ನ್ನು ಅರ್ಬಾಜ್ ಓಡಿಸುತ್ತಿದ್ದ, ಉಮೇಶ್ ಪಾಲ್ ಹಾಗೂ ಅವರ ಇಬ್ಬರು ಗನ್ನರ್​ಗಳನ್ನು ಫೆಬ್ರವರಿ 24 ರಂದು ಪ್ರಯಾಗ್​ರಾಜ್​ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಮತ್ತಷ್ಟು ಓದಿ: ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ರಾಜುಪಾಲ್ ಹತ್ಯೆ ಪ್ರಕರಣದಲ್ಲಿ ಉಮೇಶ್ ಪಾಲ್ ಸಾಕ್ಷಿಯಾಗಿದ್ದರು, ಉಮೇಶ್ ಕಾರಿನಿಂದ ಇಳಿದ ತಕ್ಷಣ ಆತನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಉಮೇಶ್ ಪಾಲ್ ಹತ್ಯೆಯ ಪ್ರಮುಖ ಆರೋಪಿ ಇದೀಗ ಸಬರಮತಿ ಜೈಲಿನಲ್ಲಿದ್ದಾರೆ. ಜೈಲಿನಲ್ಲಿರುವಾಗಲೇ ಅತೀಕ್ ಸಂಪೂರ್ಣ ಸಂಚು ರೂಪಿಸಿದ್ದ, ಆತ ರಾಜು ಪಾಲ್ ಹತ್ಯೆಯಲ್ಲೂ ಪ್ರಮುಖ ಆರೋಪಿಯಾಗಿದ್ದ.

ಉಮೇಶ್ ಪಾಲ್ ಪತ್ನಿ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಅತೀಕ್ ಅಹ್ಮದ್, ಪತ್ನಿ ಶೈಸ್ತಾ ಪರ್ವೀನ್, ಇಬ್ಬರು ಪುತ್ರರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್