AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಿತಾವಧಿಯಲ್ಲಿ ಕೂಡಿಟ್ಟ 65 ಸಾವಿರ ರೂ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿಗೆ ದೃಷ್ಟಿ ವಿಕಲಚೇತನ ಮನವಿ

ತಮ್ಮ ಹಳೆಯ (ಬ್ಯಾನ್ ಆಗಿರುವ ನೋಟುಗಳು) 500 ಮತ್ತು 1,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಡಲು ಸಹಾಯ ಕೇಳಿದ್ದಾರೆ.

ಜೀವಿತಾವಧಿಯಲ್ಲಿ ಕೂಡಿಟ್ಟ 65 ಸಾವಿರ ರೂ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿಗೆ ದೃಷ್ಟಿ ವಿಕಲಚೇತನ ಮನವಿ
ಜೀವಿತಾವಧಿಯಲ್ಲಿ ಕೂಡಿಟ್ಟ 65 ಸಾವಿರ ರೂ ಹಳೆಯ ನೋಟನ್ನು ಬದಲಾಯಿಸಿಕೊಡುವಂತೆ ಜಿಲ್ಲಾಧಿಕಾರಿಗೆ ದೃಷ್ಟಿ ವಿಕಲಚೇತನ ಮನವಿ
TV9 Web
| Edited By: ಆಯೇಷಾ ಬಾನು|

Updated on:Oct 20, 2021 | 12:58 PM

Share

ತಮಿಳುನಾಡು: ಬ್ಯಾನ್ ಆಗಿರುವ ಹಳೆಯ ನೋಟುಗಳನ್ನು ಬದಲಾಯಿಸಿಕೊಡುವಂತೆ 65 ವರ್ಷ ವಯಸ್ಸಿನ ದೃಷ್ಟಿ ವಿಕಲಚೇತನರೊಬ್ಬರು ಕೃಷ್ಣಗಿರಿ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹಳೆಯ (ಬ್ಯಾನ್ ಆಗಿರುವ ನೋಟುಗಳು) 500 ಮತ್ತು 1,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಡಲು ಸಹಾಯ ಕೇಳಿದ್ದಾರೆ.

ದೃಷ್ಟಿಹೀನ ಭಿಕ್ಷುಕನೊಬ್ಬ ಭಿಕ್ಷಾಟನೆ ಮಾಡಿ ಒಟ್ಟು 65,000 ರೂ. ಜೋಡಿಸಿದ್ದು ಅನಾರೋಗ್ಯದ ಕಾರಣ ಹಣ ವಿಟ್ಟಿರುವ ಜಾಗವನ್ನ ಮರೆತಿದ್ದಾರೆ. ಕಣ್ಣು ಕಾಣದ‌ ಪರಿಣಾಮ ಹಣ ಇಟ್ಟಿದ್ದ ಜಾಗ ಸಿಕ್ಕಿರಲಿಲ್ಲ. ಸದ್ಯ ಹಣ ಇಟ್ಟ ಜಾಗ ನೆನಪಾಗಿ ಹಣ ಸಿಕ್ಕಿದ್ದು ಸ್ಥಳೀಯರ ಸಹಾಯದಿಂದ ಹಳೆಯ ನೋಟುಗಳ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಚಲಾವಣೆಯಾಗದ ಹಳೆಯ ನೋಟನ್ನು ಬದಲಿಸಿ ಹೊಸ ನೋಟುಗಳನ್ನ ನೀಡುವಂತೆ ಕೃಷ್ಣಗಿರಿ ಜಿಲ್ಲಾಧಿಕಾರಿಯವರ ಬಳಿ ಬೇಡಿಕೊಂಡಿದ್ದಾರೆ.

ಚಿನ್ನಕಣ್ಣು ಎಂಬ ವ್ಯಕ್ತಿ ಕೃಷ್ಣಗಿರಿ ಜಿಲ್ಲೆಯ ಚಿನ್ನಗೌಂಡನೂರು ಗ್ರಾಮದಲ್ಲಿ ಚಿಕ್ಕ ಗುಡಿಸಿಲಿನಲ್ಲಿ ವಾಸವಾಗಿದ್ದಾರೆ. ಇವರು ತಮ್ಮ ಐದನೇ ವಯಸ್ಸಿನಲ್ಲೇ ದೃಷ್ಟಿಹೀನರಾಗಿದ್ದು, ಭಿಕ್ಷೆ ಬೇಡುವ ಮೂಲಕ ಹಣ ಜೋಡಿಸಿದ್ದಾರಂತೆ. ಅವರು ನಾಲ್ಕು ವರ್ಷಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದರು ಮತ್ತು ಅವರ ಜೀವಿತಾವಧಿಯ ಉಳಿತಾಯ 65,000 ರೂ.ಗಳನ್ನು ಎಲ್ಲಿ ಇಟ್ಟಿದ್ದರು ಎಂಬುದನ್ನು ಮರೆತಿದ್ದರು. ಈ ನಡುವೆ ನೋಟ್ ಬ್ಯಾನ್ ಆಗಿದ್ದು ಇದರ ಬಗ್ಗೆ ಅವರಿಗೆ ಅರಿವಿರಲಿಲ್ಲ. ಆದರೆ ಸ್ಥಳೀಯರಿಂದ ಈ ಬಗ್ಗೆ ಮಾಹಿತಿ ಸಿಕ್ಕಿದ್ದು ತಮ್ಮ ಜೀವಿತಾವಧಿಯಿಂದ ಕಾಪಾಡಿಕೊಂಡು ಬಂದಿದ್ದ ಹಣವನ್ನು ಬಳಸಲಾಗುವುದಿಲ್ಲ ಎಂದು ನೊಂದಿದ್ದರು. ಸದ್ಯ ಈಗ ಹಣವೂ ಸಿಕ್ಕಿದ್ದು ಅದನ್ನು ಬದಲಾಯಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Facebook: ಹೊಸ ಹೆಸರಿನೊಂದಿಗೆ ಮರುಬ್ರ್ಯಾಂಡ್ ಆಗಲಿದೆಯಂತೆ ಫೇಸ್​ಬುಕ್ ಎನ್ನುತ್ತಿವೆ ಮೂಲಗಳು

Published On - 12:54 pm, Wed, 20 October 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!