AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ

ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ.   

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ
ನಿರ್ಮಾಣ ಹಂತದ ಸೇತುವೆ ಕುಸಿತ
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 8:17 PM

Share

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಭಾನುವಾರ ಬಿಹಾರ (Bihar) ದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೂಪರ್ ಸ್ಟ್ರಕ್ಚರ್​ ಸೇತುವೆ 2ನೇ ಸಲ ಕುಸಿದಿದೆ. ಸೇತುವೆಯ 500 ಮೀಟರ್ ಭಾಗವು ಇದ್ದಕ್ಕಿದ್ದಂತೆ ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇತ್ತೀಚೆಗೆ ಚಂಡಮಾರುತದಿಂದಾಗಿ ಏಪ್ರಿಲ್​ನಲ್ಲಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎನ್ನಲಾಗಿದೆ.

ಸಿಎಂ ನಿತೀಶ್ ಕುಮಾರ್ ಅವರು 23 ಫೆಬ್ರವರಿ 2014 ರಂದು ಸೇತುವೆಯ ಶಂಕುಸ್ಥಾಪನೆ ಮಾಡಿದ್ದರು. ಬಿಹಾರ ಸರ್ಕಾರದ ಈ ಯೋಜನೆಯನ್ನು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆ ಎಂದು ಪರಿಗಣಿಸಲಾಗಿತ್ತು. ಈ ಯೋಜನೆಯ ವೆಚ್ಚದ ಆರಂಭಿಕ ಮೌಲ್ಯಮಾಪನ 1710.77 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಈ ಸೇತುವೆಯ ನಿರ್ಮಾಣದಿಂದ ಉತ್ತರ ಮತ್ತು ದಕ್ಷಿಣ ಬಿಹಾರ ನಡುವಿನ ಅಂತರ ಗಣನೀಯವಾಗಿ ಕಡಿಮೆಯಾಗಲಿದೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಈ ಸೇತುವೆ ಉದ್ದ ಸುಮಾರು 3.160 ಕಿ.ಮೀ. ರಸ್ತೆಯ ಒಟ್ಟು ಉದ್ದ ಸುಮಾರು 25 ಕಿ.ಮೀ ಆಗಿದ್ದು, ಮಾರ್ಚ್ 2020 ರೊಳಗೆ ಸಂಚಾರ ಆರಂಭಿಸುವುದಾಗಿ ಇಲಾಖೆ ಸೂಚನೆ ನೀಡಿತ್ತು. ಈ ಸೇತುವೆ NH 31 ಮತ್ತು NH 80 ಸಂಪರ್ಕಗೊಳ್ಳಲಿದೆ.

ಇದನ್ನೂ ಓದಿ: Restoration: ರೈಲುದುರಂತ ಸ್ಥಳದಲ್ಲಿ ತ್ವರಿತವಾಗಿ ನಡೆಯುತ್ತಿರುವ ದುರಸ್ತಿ; ರಾತ್ರಿ 8ರಷ್ಟರಲ್ಲಿ 2 ರೈಲ್ವೆ ಲೈನ್ ಸಿದ್ಧಗೊಳ್ಳುವ ಸಾಧ್ಯತೆ

ರಾಷ್ಟ್ರೀಯ ಹೆದ್ದಾರಿ 31, ಪಸ್ರಾಹಾ ಮತ್ತು ಮುಂಗೇರ್ ಭಾಗಲ್ಪುರ್ ರಾಷ್ಟ್ರೀಯ ಹೆದ್ದಾರಿ 80 ರಲ್ಲಿರುವ ಸುಲ್ತಂಗಂಜ್ ಬಳಿ ನಾಲ್ಕು-ಪಥದ ರಸ್ತೆಗೆ ಈ ಸೇತುವೆಯನ್ನು ಸಂಪರ್ಕಿಸಲಾಗುತ್ತಿದೆ.

ಘಟನೆ ಕುರಿತಾಗಿ ಎಎನ್​ಐ ಜೊತೆ ಎಲ್​ಒಪಿ ವಿಜಯ್​ ಕುಮಾರ್​ ಸಿನ್ಹಾ ಮಾತನಾಡಿದ್ದು, ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 pm, Sun, 4 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ