AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ

ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ.   

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ
ನಿರ್ಮಾಣ ಹಂತದ ಸೇತುವೆ ಕುಸಿತ
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 8:17 PM

Share

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಭಾನುವಾರ ಬಿಹಾರ (Bihar) ದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೂಪರ್ ಸ್ಟ್ರಕ್ಚರ್​ ಸೇತುವೆ 2ನೇ ಸಲ ಕುಸಿದಿದೆ. ಸೇತುವೆಯ 500 ಮೀಟರ್ ಭಾಗವು ಇದ್ದಕ್ಕಿದ್ದಂತೆ ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇತ್ತೀಚೆಗೆ ಚಂಡಮಾರುತದಿಂದಾಗಿ ಏಪ್ರಿಲ್​ನಲ್ಲಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎನ್ನಲಾಗಿದೆ.

ಸಿಎಂ ನಿತೀಶ್ ಕುಮಾರ್ ಅವರು 23 ಫೆಬ್ರವರಿ 2014 ರಂದು ಸೇತುವೆಯ ಶಂಕುಸ್ಥಾಪನೆ ಮಾಡಿದ್ದರು. ಬಿಹಾರ ಸರ್ಕಾರದ ಈ ಯೋಜನೆಯನ್ನು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆ ಎಂದು ಪರಿಗಣಿಸಲಾಗಿತ್ತು. ಈ ಯೋಜನೆಯ ವೆಚ್ಚದ ಆರಂಭಿಕ ಮೌಲ್ಯಮಾಪನ 1710.77 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಈ ಸೇತುವೆಯ ನಿರ್ಮಾಣದಿಂದ ಉತ್ತರ ಮತ್ತು ದಕ್ಷಿಣ ಬಿಹಾರ ನಡುವಿನ ಅಂತರ ಗಣನೀಯವಾಗಿ ಕಡಿಮೆಯಾಗಲಿದೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಈ ಸೇತುವೆ ಉದ್ದ ಸುಮಾರು 3.160 ಕಿ.ಮೀ. ರಸ್ತೆಯ ಒಟ್ಟು ಉದ್ದ ಸುಮಾರು 25 ಕಿ.ಮೀ ಆಗಿದ್ದು, ಮಾರ್ಚ್ 2020 ರೊಳಗೆ ಸಂಚಾರ ಆರಂಭಿಸುವುದಾಗಿ ಇಲಾಖೆ ಸೂಚನೆ ನೀಡಿತ್ತು. ಈ ಸೇತುವೆ NH 31 ಮತ್ತು NH 80 ಸಂಪರ್ಕಗೊಳ್ಳಲಿದೆ.

ಇದನ್ನೂ ಓದಿ: Restoration: ರೈಲುದುರಂತ ಸ್ಥಳದಲ್ಲಿ ತ್ವರಿತವಾಗಿ ನಡೆಯುತ್ತಿರುವ ದುರಸ್ತಿ; ರಾತ್ರಿ 8ರಷ್ಟರಲ್ಲಿ 2 ರೈಲ್ವೆ ಲೈನ್ ಸಿದ್ಧಗೊಳ್ಳುವ ಸಾಧ್ಯತೆ

ರಾಷ್ಟ್ರೀಯ ಹೆದ್ದಾರಿ 31, ಪಸ್ರಾಹಾ ಮತ್ತು ಮುಂಗೇರ್ ಭಾಗಲ್ಪುರ್ ರಾಷ್ಟ್ರೀಯ ಹೆದ್ದಾರಿ 80 ರಲ್ಲಿರುವ ಸುಲ್ತಂಗಂಜ್ ಬಳಿ ನಾಲ್ಕು-ಪಥದ ರಸ್ತೆಗೆ ಈ ಸೇತುವೆಯನ್ನು ಸಂಪರ್ಕಿಸಲಾಗುತ್ತಿದೆ.

ಘಟನೆ ಕುರಿತಾಗಿ ಎಎನ್​ಐ ಜೊತೆ ಎಲ್​ಒಪಿ ವಿಜಯ್​ ಕುಮಾರ್​ ಸಿನ್ಹಾ ಮಾತನಾಡಿದ್ದು, ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 pm, Sun, 4 June 23

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ