AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ

ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ.   

Bihar: ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ 2ನೇ ಸಲ ಕುಸಿತ
ನಿರ್ಮಾಣ ಹಂತದ ಸೇತುವೆ ಕುಸಿತ
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 8:17 PM

Share

ಬಿಹಾರ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿರುವಂತಹ ಘಟನೆ ಭಾನುವಾರ ಬಿಹಾರ (Bihar) ದ ಭಾಗಲ್ಪುರದಲ್ಲಿ ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ಆಗುವನಿ-ಸುಲ್ತಂಗಂಜ್ ನಡುವೆ ನಿರ್ಮಾಣವಾಗುತ್ತಿದ್ದ ಸೂಪರ್ ಸ್ಟ್ರಕ್ಚರ್​ ಸೇತುವೆ 2ನೇ ಸಲ ಕುಸಿದಿದೆ. ಸೇತುವೆಯ 500 ಮೀಟರ್ ಭಾಗವು ಇದ್ದಕ್ಕಿದ್ದಂತೆ ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇತ್ತೀಚೆಗೆ ಚಂಡಮಾರುತದಿಂದಾಗಿ ಏಪ್ರಿಲ್​ನಲ್ಲಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು ಎನ್ನಲಾಗಿದೆ.

ಸಿಎಂ ನಿತೀಶ್ ಕುಮಾರ್ ಅವರು 23 ಫೆಬ್ರವರಿ 2014 ರಂದು ಸೇತುವೆಯ ಶಂಕುಸ್ಥಾಪನೆ ಮಾಡಿದ್ದರು. ಬಿಹಾರ ಸರ್ಕಾರದ ಈ ಯೋಜನೆಯನ್ನು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆ ಎಂದು ಪರಿಗಣಿಸಲಾಗಿತ್ತು. ಈ ಯೋಜನೆಯ ವೆಚ್ಚದ ಆರಂಭಿಕ ಮೌಲ್ಯಮಾಪನ 1710.77 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಈ ಸೇತುವೆಯ ನಿರ್ಮಾಣದಿಂದ ಉತ್ತರ ಮತ್ತು ದಕ್ಷಿಣ ಬಿಹಾರ ನಡುವಿನ ಅಂತರ ಗಣನೀಯವಾಗಿ ಕಡಿಮೆಯಾಗಲಿದೆ.

ಇದನ್ನೂ ಓದಿ: ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಈ ಸೇತುವೆ ಉದ್ದ ಸುಮಾರು 3.160 ಕಿ.ಮೀ. ರಸ್ತೆಯ ಒಟ್ಟು ಉದ್ದ ಸುಮಾರು 25 ಕಿ.ಮೀ ಆಗಿದ್ದು, ಮಾರ್ಚ್ 2020 ರೊಳಗೆ ಸಂಚಾರ ಆರಂಭಿಸುವುದಾಗಿ ಇಲಾಖೆ ಸೂಚನೆ ನೀಡಿತ್ತು. ಈ ಸೇತುವೆ NH 31 ಮತ್ತು NH 80 ಸಂಪರ್ಕಗೊಳ್ಳಲಿದೆ.

ಇದನ್ನೂ ಓದಿ: Restoration: ರೈಲುದುರಂತ ಸ್ಥಳದಲ್ಲಿ ತ್ವರಿತವಾಗಿ ನಡೆಯುತ್ತಿರುವ ದುರಸ್ತಿ; ರಾತ್ರಿ 8ರಷ್ಟರಲ್ಲಿ 2 ರೈಲ್ವೆ ಲೈನ್ ಸಿದ್ಧಗೊಳ್ಳುವ ಸಾಧ್ಯತೆ

ರಾಷ್ಟ್ರೀಯ ಹೆದ್ದಾರಿ 31, ಪಸ್ರಾಹಾ ಮತ್ತು ಮುಂಗೇರ್ ಭಾಗಲ್ಪುರ್ ರಾಷ್ಟ್ರೀಯ ಹೆದ್ದಾರಿ 80 ರಲ್ಲಿರುವ ಸುಲ್ತಂಗಂಜ್ ಬಳಿ ನಾಲ್ಕು-ಪಥದ ರಸ್ತೆಗೆ ಈ ಸೇತುವೆಯನ್ನು ಸಂಪರ್ಕಿಸಲಾಗುತ್ತಿದೆ.

ಘಟನೆ ಕುರಿತಾಗಿ ಎಎನ್​ಐ ಜೊತೆ ಎಲ್​ಒಪಿ ವಿಜಯ್​ ಕುಮಾರ್​ ಸಿನ್ಹಾ ಮಾತನಾಡಿದ್ದು, ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 pm, Sun, 4 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​