AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರು ಸಾವು, 14 ಮಂದಿಗೆ ಗಾಯ

ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದು 14 ಕಾರ್ಮಿಕರು ಗಾಯಗೊಂಡಿದ್ದು, ಎರಡು ತಿಂಗಳ ಹೆಣ್ಣು ಮಗು ಮತ್ತು ಒಬ್ಬ ಪುರುಷ ನಿದ್ರೆಯಲ್ಲಿದ್ದಾಗ ಸಾವನ್ನಪ್ಪಿದ್ದಾರೆ.

ಲಕ್ನೋ: ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರು ಸಾವು, 14 ಮಂದಿಗೆ ಗಾಯ
ಕಟ್ಟಡ ಕುಸಿತImage Credit source: Hindustan Times
ನಯನಾ ರಾಜೀವ್
|

Updated on: Sep 29, 2023 | 11:31 AM

Share

ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಲಕ್ನೋನಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯ ಮಹಡಿ ಕುಸಿದು 14 ಕಾರ್ಮಿಕರು ಗಾಯಗೊಂಡಿದ್ದು, ಎರಡು ತಿಂಗಳ ಹೆಣ್ಣು ಮಗು ಮತ್ತು ಒಬ್ಬ ಪುರುಷ ನಿದ್ರೆಯಲ್ಲಿದ್ದಾಗ ಸಾವನ್ನಪ್ಪಿದ್ದಾರೆ.

ಗುರುವಾರ ಮಧ್ಯರಾತ್ರಿ ಕಾಳಿಂದಿ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಅಲ್ಲೇ ನೆಲಪಾಳಿಗೆಯಲ್ಲಿ ವಾಸಿಸುತ್ತಿದ್ದರು, ಮಹಡಿ ಕುಸಿದಿದ್ದರಿಂದ ಕಾರ್ಮಿಕರು ನಿದ್ರೆಯಲ್ಲಿ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಹೆಚ್ಚುವರಿ ಪೊಲೀಸ್ ಉಪ ಕಮಿಷನರ್ ಸೈಯದ್ ಅಲಿ ಅಬ್ಬಾಸ್ ಹೇಳಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬದುಕುಳಿದವರಿಗಾಗಿ ಹುಡುಕಾಟ ಆರಂಭಿಸಿದೆ.

ಮತ್ತಷ್ಟು ಓದಿ: ಗ್ರೇಟರ್​ ನೋಯ್ಡಾದಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​ ಕುಸಿದು 4 ಮಂದಿ ಸಾವು

ಘಟನೆಯಲ್ಲಿ ಕಾರ್ಮಿಕ ಮುಕದಮ್ (30) ಮತ್ತು ಎರಡು ತಿಂಗಳ ಹೆಣ್ಣು ಮಗು ಐಶ್ಯಾ ಸಾವನ್ನಪ್ಪಿದ್ದು, ಗಾಯಗೊಂಡ ಇತರ 14 ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?