AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ವೆಲ್ಲೂರಿನಲ್ಲಿ ಚರ್ಚ್‌ನ ಛಾವಣಿ ಕುಸಿತ; ಮೂವರು ಕಾರ್ಮಿಕರ ಸಾವು, 11 ಮಂದಿಗೆ ಗಾಯ

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ತಿರುವಲಮ್ ಪ್ರದೇಶದಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಂಜುಕೃಷ್ಣಪುರಂನಲ್ಲಿ ನಿರ್ಮಾಣ ಹಂತದ ಸಿಎಸ್ಐ ಜೈನ್ ಹಿಲ್ ಚರ್ಚ್‌ನ ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯು ಸ್ಥಳದಲ್ಲಿ ವ್ಯಾಪಕ ಭೀತಿಯನ್ನುಂಟುಮಾಡಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ತಕ್ಷಣ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಗುರುವಾರ ಸಂಜೆ 4.30ರ ಸುಮಾರಿಗೆ ಚರ್ಚ್‌ನ ಛಾವಣಿಯ ಮೇಲೆ ಕಾಂಕ್ರೀಟ್ ಕೆಲಸ ನಡೆಯುತ್ತಿತ್ತು ಎಂದು ವರದಿಯಾಗಿದೆ. ಇದ್ದಕ್ಕಿದ್ದಂತೆ, ನಿರ್ಮಾಣ ಹಂತದಲ್ಲಿದ್ದ ರಚನೆ ಕುಸಿದು ಬಿತ್ತು.

ತಮಿಳುನಾಡಿನ ವೆಲ್ಲೂರಿನಲ್ಲಿ ಚರ್ಚ್‌ನ ಛಾವಣಿ ಕುಸಿತ; ಮೂವರು ಕಾರ್ಮಿಕರ ಸಾವು, 11 ಮಂದಿಗೆ ಗಾಯ
ವೆಲ್ಲೂರಿನಲ್ಲಿ ಚರ್ಚ್‌ನ ಛಾವಣಿ ಕುಸಿತImage Credit source: TV9
ಸುಷ್ಮಾ ಚಕ್ರೆ
|

Updated on: Sep 11, 2026 | 6:36 PM

Share

ವೆಲ್ಲೂರು, ಸೆಪ್ಟೆಂಬರ್ 11: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್ ಒಂದರ ಕಾಂಕ್ರೀಟ್ ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, 11ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿರುವ ಭೀಕರ ದುರಂತ ಸಂಭವಿಸಿದೆ. ಚರ್ಚ್‌ನ ಮೇಲ್ಛಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿ ನಡೆಯುತ್ತಿದ್ದಾಗ ತಾತ್ಕಾಲಿಕವಾಗಿ ಹಾಕಲಾಗಿದ್ದ ಸೆಂಟರಿಂಗ್ ಕಂಬಗಳು ಶಕ್ತಿ ತಡೆಯಲಾರದೆ ಕುಸಿದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಛಾವಣಿ ಕುಸಿದ ತಕ್ಷಣವೇ ಸ್ಥಳೀಯರು, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾಂಕ್ರೀಟ್ ಹಾಗೂ ಕಬ್ಬಿಣದ ರಾಡ್‌ಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆದು ಹತ್ತಿರದ ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: ಟೈಲರ್ ಮಗ, ಪೈಲಟ್ ಟ್ರೈನಿಂಗ್ ಮತ್ತು 9/11 ದಾಳಿ ನಂಟು: ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಮುಂಬೈ ಯುವಕನ ಕಥೆ

ಅಪಘಾತದಲ್ಲಿ ಮೃತಪಟ್ಟವರೆಲ್ಲ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು. ಮೃತರನ್ನು ಬೆಂಗಳೂರಿನ ಕಟ್ಟಡ ಗುತ್ತಿಗೆದಾರ ಜಾನ್ (39), ಆಂಧ್ರಪ್ರದೇಶದ ಎಮ್ಯಾನುಯೆಲ್ (45) ಮತ್ತು ಸ್ಯಾಮ್ಯುಯೆಲ್ (45) ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಮ್ಯಾನುಯೆಲ್ ಸಾವನ್ನಪ್ಪಿದರೆ, ಸ್ಯಾಮ್ಯುಯೆಲ್ ಅವರ ಶವವನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ವೆಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಿರ್ಮಾಣ ಕಾರ್ಯದಲ್ಲಿ ಬಳಸಲಾದ ಸಾಮಗ್ರಿಗಳ ಗುಣಮಟ್ಟ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದ ಕುರಿತು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಕಟ್ಟಡದ ಕಾಂಕ್ರೀಟ್ ತೆರವುಗೊಳಿಸುವ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ: ನಿದ್ದೆಯಲ್ಲಿದ್ದ ಪತ್ನಿ, ಮೂವರು ಪುತ್ರಿಯರ ತಲೆ ಮೇಲೆ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯಿಂದ ಬರ್ಬರ ಕೊಲೆ

30 ಸದಸ್ಯರ NDRF ತಂಡ ಆಗಮನ:

ಇತರ ಕಾರ್ಮಿಕರು ಅವಶೇಷಗಳಡಿ ಸಿಲುಕಿರಬಹುದೆಂಬ ಭಯದಿಂದ, ರಕ್ಷಣಾ ಕಾರ್ಯಾಚರಣೆ ಸಂಜೆ ತಡವಾಗಿ ಮುಂದುವರೆಯಿತು. 30 ಸದಸ್ಯರ NDRF ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿತ್ತು. ಅರಕ್ಕೋಣಂ ಘಟಕದ ನಾಲ್ಕು ಸ್ನಿಫರ್ ನಾಯಿಗಳನ್ನು ಸಹ ನಿಯೋಜಿಸಲಾಗಿತ್ತು. ಆಂಧ್ರಪ್ರದೇಶದ ಗಡಿ ಹತ್ತಿರದಲ್ಲಿರುವುದರಿಂದ, ಅಲ್ಲಿಂದ ಬಂದ ಪೊಲೀಸ್ ತಂಡವು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿತು.

ಮೂಲಗಳ ಪ್ರಕಾರ, ಗುರುವಾರ ಸಂಜೆ ಚರ್ಚ್ ಅಧಿಕಾರಿಗಳು ಛಾವಣಿಯ ಮೇಲೆ ಕಾಂಕ್ರೀಟ್ ಸುರಿಯುವ ಕೆಲಸ ನಡೆಯುತ್ತಿದೆ ಎಂದು ವರದಿ ಮಾಡಿದ್ದರು. ಈ ಸಮಯದಲ್ಲಿ, ಹಲವಾರು ಕಾರ್ಮಿಕರು ಕಟ್ಟಡದ ಬಳಿ ಬಿರಿಯಾನಿ ತಿನ್ನಲು ಹೊರಟರು. ಅಪಘಾತದ ಸಮಯದಲ್ಲಿ ಅವರು ಕಟ್ಟಡದಲ್ಲಿ ಇಲ್ಲದ ಕಾರಣ ಅವರ ಜೀವ ಉಳಿಯಿತು. ಆ ಸಮಯದಲ್ಲಿ ಎಲ್ಲಾ ಕಾರ್ಮಿಕರು ಕಟ್ಟಡದೊಳಗೆ ಇದ್ದಿದ್ದರೆ, ದುರಂತ ಇನ್ನೂ ಭೀಕರವಾಗಿರುತ್ತಿತ್ತು ಎಂದು ನಂಬಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್!
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್!
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಅಕ್ರಮವಾಗಿ ಬಂದೂಕು ಇಟ್ಟುಕೊಂಡವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಸಿಎಂ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ