Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Underworld Don Chhota Rajan Death Hoax: ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ಅವರನ್ನು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್
ಛೋಟಾ ರಾಜನ್
Follow us
guruganesh bhat
|

Updated on:May 07, 2021 | 5:36 PM

ದೆಹಲಿ: ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಇಂದು (ಮೇ 7) ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿದೆ.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಒಂದು ಕಾಲದಲ್ಲಿ ಅಂದರೆ ಭೂಗತ ಲೋಕವನ್ನು ಪ್ರವೇಶಿಸುವ ಮುನ್ನ,  ರಾಜೇಂದ್ರ ನಿಕಲಾಜೆ ಎಂಬ ಹೆಸರು ಹೊಂದಿದ್ದ ಛೋಟಾ ರಾಜನ್ ನಂತರ ಭೂಗತ ಪಾತಕಿ, ಡಿ ಗ್ಯಾಂಗ್​ನ ದಾವೂದ್ ಇಬ್ರಾಹಿಂನ ಸಹಚರನಾಗಿ ಗುರುತಿಸಲ್ಪಟ್ಟಿದ್ದ. ಆದರೆ ಮುಂದೆ ಭೂಗತ ಲೋಕದಲ್ಲಿ ಸ್ವಯಂ ಶಕ್ತಿಯಾಗಿ ಬೆಳೆದ ಆತ ದಾವೂದ್ ಇಬ್ರಾಹಿಂಗೆ ಭರ್ಜರಿ ಪೈಪೋಟಿ ನೀಡಲಾರಂಭಿಸಿದ. ಭೂಗತ ಲೋಕವನ್ನು ನಿಯಂತ್ರಿಸುವ ವಿಷಯದಲ್ಲಿ ದಾವೂದ್ ಇಬ್ರಾಂಹಿಂಗೂ ಛೋಟಾ ರಾಜನ್​ಗೂ  ಶೀತಲ  ಸಮರ ನಡೆದಿತ್ತು.

ಕರ್ನಾಟಕದ ಮಂಡ್ಯದ ನಕಲಿ ವಿಳಾಸ ನೀಡಿ ಪಾಸ್​ಪೋರ್ಟ್ ಪಡೆದಿದ್ದ ಛೋಟಾ ರಾಜನ್ ವಿರುದ್ಧ ಮಂಡ್ಯ ತಹಶೀಲ್ದಾರ್ ದೆಹಲಿ ಕೋರ್ಟ್​ನಲ್ಲಿ  ಸಾಕ್ಷ್ಯ ಹೇಳಿದ್ದರು ‌. ಪಾಸ್​ಪೋರ್ಟ್ ಪ್ರಕರಣದಲ್ಲಿ ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು ‌ ನೀಡಿತ್ತು.

ತಿಹಾರ್ ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದ ಛೋಟಾ ರಾಜನ್​ನನ್ನು ಇತರ ಕೈದಿಗಳ ಜತೆ ಬೆರೆಯುವುದರಿಂದ ದೂರವಿಡಲಾಗಿತ್ತು. ಸುರಕ್ಷತೆಯ ದೃಷ್ಟಿಯಿಂದ ಛೋಟಾ ರಾಜನ್​ಗೆ ಏಕಾಂತ ಕಾರಾಗೃಹವಾಸ ವಿಧಿಸಲಾಗಿತ್ತು.

2015ರಲ್ಲಿ ಛೋಟಾ ರಾಜನ್​ನ್ನು ಇಂಡೋನೇಷ್ಯಾದಿಂದ ಬಂಧಿಸಿ ಭಾರತಕ್ಕೆ ತರಲಾಗಿತ್ತು.  ತದನಂತರ ತಿಹಾರ್ ಜೈಲಿನಲ್ಲಿ ಬಂಧಿಸಿ ಇಡಲಾಗಿತ್ತು.

ಇದನ್ನೂ ಓದಿ: Karnataka Lockdown: ಕರ್ನಾಟಕ ಸಂಪೂರ್ಣ ಲಾಕ್​ಡೌನ್? ಅಧಿಕೃತ ಘೋಷಣೆಯೊಂದೇ ಬಾಕಿ 

ದಾವೂದ್​ ಇಬ್ರಾಹಿಂಗೆ ವಯಸ್ಸಾಯ್ತು; ಪಾತಕಲೋಕ ಆಳುವ ‘ಡಿ’ ಕಂಪನಿಗೆ ಉತ್ತರಾಧಿಕಾರಿ ಬೇಕಂತೆ.. (Underworld don and gangster Chhota Rajan died due to Covid-19 at AIIMS New Delhi on Friday)

Published On - 4:05 pm, Fri, 7 May 21

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ