AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Underworld Don Chhota Rajan Death Hoax: ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ಅವರನ್ನು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್
ಛೋಟಾ ರಾಜನ್
guruganesh bhat
|

Updated on:May 07, 2021 | 5:36 PM

Share

ದೆಹಲಿ: ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಇಂದು (ಮೇ 7) ಮೃತಪಟ್ಟಿದ್ದಾನೆ ಎಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿದೆ.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಒಂದು ಕಾಲದಲ್ಲಿ ಅಂದರೆ ಭೂಗತ ಲೋಕವನ್ನು ಪ್ರವೇಶಿಸುವ ಮುನ್ನ,  ರಾಜೇಂದ್ರ ನಿಕಲಾಜೆ ಎಂಬ ಹೆಸರು ಹೊಂದಿದ್ದ ಛೋಟಾ ರಾಜನ್ ನಂತರ ಭೂಗತ ಪಾತಕಿ, ಡಿ ಗ್ಯಾಂಗ್​ನ ದಾವೂದ್ ಇಬ್ರಾಹಿಂನ ಸಹಚರನಾಗಿ ಗುರುತಿಸಲ್ಪಟ್ಟಿದ್ದ. ಆದರೆ ಮುಂದೆ ಭೂಗತ ಲೋಕದಲ್ಲಿ ಸ್ವಯಂ ಶಕ್ತಿಯಾಗಿ ಬೆಳೆದ ಆತ ದಾವೂದ್ ಇಬ್ರಾಹಿಂಗೆ ಭರ್ಜರಿ ಪೈಪೋಟಿ ನೀಡಲಾರಂಭಿಸಿದ. ಭೂಗತ ಲೋಕವನ್ನು ನಿಯಂತ್ರಿಸುವ ವಿಷಯದಲ್ಲಿ ದಾವೂದ್ ಇಬ್ರಾಂಹಿಂಗೂ ಛೋಟಾ ರಾಜನ್​ಗೂ  ಶೀತಲ  ಸಮರ ನಡೆದಿತ್ತು.

ಕರ್ನಾಟಕದ ಮಂಡ್ಯದ ನಕಲಿ ವಿಳಾಸ ನೀಡಿ ಪಾಸ್​ಪೋರ್ಟ್ ಪಡೆದಿದ್ದ ಛೋಟಾ ರಾಜನ್ ವಿರುದ್ಧ ಮಂಡ್ಯ ತಹಶೀಲ್ದಾರ್ ದೆಹಲಿ ಕೋರ್ಟ್​ನಲ್ಲಿ  ಸಾಕ್ಷ್ಯ ಹೇಳಿದ್ದರು ‌. ಪಾಸ್​ಪೋರ್ಟ್ ಪ್ರಕರಣದಲ್ಲಿ ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು ‌ ನೀಡಿತ್ತು.

ತಿಹಾರ್ ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದ ಛೋಟಾ ರಾಜನ್​ನನ್ನು ಇತರ ಕೈದಿಗಳ ಜತೆ ಬೆರೆಯುವುದರಿಂದ ದೂರವಿಡಲಾಗಿತ್ತು. ಸುರಕ್ಷತೆಯ ದೃಷ್ಟಿಯಿಂದ ಛೋಟಾ ರಾಜನ್​ಗೆ ಏಕಾಂತ ಕಾರಾಗೃಹವಾಸ ವಿಧಿಸಲಾಗಿತ್ತು.

2015ರಲ್ಲಿ ಛೋಟಾ ರಾಜನ್​ನ್ನು ಇಂಡೋನೇಷ್ಯಾದಿಂದ ಬಂಧಿಸಿ ಭಾರತಕ್ಕೆ ತರಲಾಗಿತ್ತು.  ತದನಂತರ ತಿಹಾರ್ ಜೈಲಿನಲ್ಲಿ ಬಂಧಿಸಿ ಇಡಲಾಗಿತ್ತು.

ಇದನ್ನೂ ಓದಿ: Karnataka Lockdown: ಕರ್ನಾಟಕ ಸಂಪೂರ್ಣ ಲಾಕ್​ಡೌನ್? ಅಧಿಕೃತ ಘೋಷಣೆಯೊಂದೇ ಬಾಕಿ 

ದಾವೂದ್​ ಇಬ್ರಾಹಿಂಗೆ ವಯಸ್ಸಾಯ್ತು; ಪಾತಕಲೋಕ ಆಳುವ ‘ಡಿ’ ಕಂಪನಿಗೆ ಉತ್ತರಾಧಿಕಾರಿ ಬೇಕಂತೆ.. (Underworld don and gangster Chhota Rajan died due to Covid-19 at AIIMS New Delhi on Friday)

Published On - 4:05 pm, Fri, 7 May 21

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?