AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್​ ಅಲ್ಲ. ಅವನ ಕೇಸ್​ಗಳನ್ನು ಉಳಿದವರ ಕೇಸ್​ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ.

Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ
ಛೋಟಾ ರಾಜನ್​
TV9 Web
| Edited By: |

Updated on: Jul 29, 2021 | 1:40 PM

Share

ಭೂಗತ ಪಾತಕಿ ರಾಜೇಂದ್ರ ನಿಖಾಲ್ಜೆ ಅಲಿಯಾಸ್​ ಛೋಟಾ ರಾಜನ್ (Chhota Rajan) ದೆಹಲಿಯ ಏಮ್ಸ್​ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜು.27ರಂದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಎಂದು ತಿಹಾರ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 61ವರ್ಷದ ಅವರಿಗೆ ಸದ್ಯ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್​ಗೆ ದಾಖಲಿಸಲಾಗಿದೆ. ಈ ಮೊದಲು ಕೊವಿಡ್​ 19 ಪಾಸಿಟಿವ್​ ಆಗಿ ಅಡ್ಮಿಟ್ ಆಗಿದ್ದರು. ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇನ್ನು ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್​ ಅಲ್ಲ. ಅವನ ಕೇಸ್​ಗಳನ್ನು ಉಳಿದವರ ಕೇಸ್​ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಛೋಟಾ ರಾಜನ್​ ವಿರುದ್ಧ ವಿಚಾರಣೆ ಮಾಡಬೇಕಾದ ಹಲವು ಪ್ರಕರಣಗಳು ಬಾಕಿ ಇವೆ. ಅವನು ರಾಷ್ಟ್ರದ ಪಾಲಿಗೆ ಝಡ್ ಪ್ಲಸ್​ ಸೆಕ್ಯೂರಿಟಿ ಬೆದರಿಕೆ ಎಂದು ವಿಶೇಷ ಸಾರ್ವಜನಿಕ ಪ್ರಾಸಿಕ್ಯೂಟರ್ ಪರ್ದೀಪ್​ ಘಾರಟ್​, ಬಾಂಬೆ ಹೈಕೋರ್ಟ್​ನ ಅನುಜಾ ಪ್ರಭುದೇಸಾಯ್​ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ. ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜಾಮೀನು ನೀಡುವಂತೆ ಛೋಟಾ ರಾಜನ್​ ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​

Underworld don Chhota Rajan Suffering from stomach ache and admitted to Delhi AIIMS

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ