AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್​ ಅಲ್ಲ. ಅವನ ಕೇಸ್​ಗಳನ್ನು ಉಳಿದವರ ಕೇಸ್​ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ.

Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ
ಛೋಟಾ ರಾಜನ್​
TV9 Web
| Edited By: |

Updated on: Jul 29, 2021 | 1:40 PM

Share

ಭೂಗತ ಪಾತಕಿ ರಾಜೇಂದ್ರ ನಿಖಾಲ್ಜೆ ಅಲಿಯಾಸ್​ ಛೋಟಾ ರಾಜನ್ (Chhota Rajan) ದೆಹಲಿಯ ಏಮ್ಸ್​ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜು.27ರಂದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಎಂದು ತಿಹಾರ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 61ವರ್ಷದ ಅವರಿಗೆ ಸದ್ಯ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್​ಗೆ ದಾಖಲಿಸಲಾಗಿದೆ. ಈ ಮೊದಲು ಕೊವಿಡ್​ 19 ಪಾಸಿಟಿವ್​ ಆಗಿ ಅಡ್ಮಿಟ್ ಆಗಿದ್ದರು. ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇನ್ನು ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್​ ಅಲ್ಲ. ಅವನ ಕೇಸ್​ಗಳನ್ನು ಉಳಿದವರ ಕೇಸ್​ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಛೋಟಾ ರಾಜನ್​ ವಿರುದ್ಧ ವಿಚಾರಣೆ ಮಾಡಬೇಕಾದ ಹಲವು ಪ್ರಕರಣಗಳು ಬಾಕಿ ಇವೆ. ಅವನು ರಾಷ್ಟ್ರದ ಪಾಲಿಗೆ ಝಡ್ ಪ್ಲಸ್​ ಸೆಕ್ಯೂರಿಟಿ ಬೆದರಿಕೆ ಎಂದು ವಿಶೇಷ ಸಾರ್ವಜನಿಕ ಪ್ರಾಸಿಕ್ಯೂಟರ್ ಪರ್ದೀಪ್​ ಘಾರಟ್​, ಬಾಂಬೆ ಹೈಕೋರ್ಟ್​ನ ಅನುಜಾ ಪ್ರಭುದೇಸಾಯ್​ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ. ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜಾಮೀನು ನೀಡುವಂತೆ ಛೋಟಾ ರಾಜನ್​ ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​

Underworld don Chhota Rajan Suffering from stomach ache and admitted to Delhi AIIMS

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ