AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಾಹನದ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಇಬ್ಬರು ಸೈನಿಕರ ಸಾವು

ಮಣಿಪುರದ ಬಿಷ್ಣುಪುರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಸೇನಾ ವಾಹನದ ಮೇಲೆ ದಾಳಿ ಮಾಡಿದ ನಂತರ 2 ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಇಂದು ಸಂಜೆ 6 ಗಂಟೆಗೆ ದಾಳಿ ನಡೆದಾಗ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಟಾಟಾ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಜನನಿಬಿಡ ರಸ್ತೆಯಲ್ಲಿ ಸೈನಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ನಂತರ ಭಯೋತ್ಪಾದಕರು ಬಿಳಿ ವ್ಯಾನ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಾಹನದ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಇಬ್ಬರು ಸೈನಿಕರ ಸಾವು
Firing On Assam Rifles Convoy
ಸುಷ್ಮಾ ಚಕ್ರೆ
|

Updated on:Sep 19, 2025 | 9:22 PM

Share

ಬಿಷ್ಣುಪುರ, ಸೆಪ್ಟೆಂಬರ್ 19: ಮಣಿಪುರದ ಬಿಷ್ಣುಪುರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಅರೆಸೈನಿಕ ವಾಹನದ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ್ದಾರೆ. ಮಣಿಪುರದ ನಂಬೋಲ್ ಸಬಲ್ ಲೈಕೈ ಬಳಿ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಚಲಿಸುತ್ತಿದ್ದಾಗ ಸೈನಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು (Terrorist Attack) ದಾಳಿ ನಡೆಸಿದರು. ಈ ಘಟನೆ ಸಂಜೆ 5.50ರ ಸುಮಾರಿಗೆ ಕತ್ತಲೆಯಾದ ಸಮಯದಲ್ಲಿ ಹೆಚ್ಚು ಜನವಸತಿ ಪ್ರದೇಶದಲ್ಲಿ ಸಂಭವಿಸಿದೆ.

ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸಾವನ್ನಪ್ಪಿದರು. ಇತರ 5 ಮಂದಿ ಗಾಯಗೊಂಡರು. ಅವರನ್ನು ತಕ್ಷಣವೇ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (RIMS) ಸ್ಥಳಾಂತರಿಸಲಾಯಿತು. ಅಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಜನನಿಬಿಡ ರಸ್ತೆಯಲ್ಲಿ ಸೈನಿಕರನ್ನು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ನಂತರ ಭಯೋತ್ಪಾದಕರು ಬಿಳಿ ವ್ಯಾನ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಗರಿಕರಿಗೆ ಹಾನಿಯಾಗದಂತೆ ಭದ್ರತಾ ಪಡೆಗಳು ಎಚ್ಚರಿಕೆಯಿಂದ ಪ್ರತಿಕ್ರಿಯಿಸಿವೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಮೊದಲ ಬಾರಿಗೆ ಗಡಿ ನುಸುಳಲು ಉಗ್ರರ ಯತ್ನ, ಗುಂಡಿನ ಚಕಮಕಿ, ಸೈನಿಕ ಹುತಾತ್ಮ

ಈ ದಾಳಿಗೆ ಕಾರಣರಾದವರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಈಗ ಶೋಧ ಆರಂಭಿಸಿವೆ. ಈ ಘಟನೆಯ ಬಗ್ಗೆ ಮಣಿಪುರದ ಮಾಜಿ ಮುಖ್ಯಮಂತ್ರಿ ಬಿರೇನ್ ಸಿಂಗ್ ದುಃಖ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ; ಕದನ ವಿರಾಮ ಉಲ್ಲಂಘಿಸಿ ಭಾರತದ ಗಡಿಯಲ್ಲಿ ಗುಂಡಿನ ದಾಳಿ

“ಇಂದು ಸಂಜೆ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಜವಾನರು ಸಾವನ್ನಪ್ಪಿದ್ದು, ಇತರ ಹಲವರು ಗಾಯಗೊಂಡಿದ್ದಾರೆ. ಅಸ್ಸಾಂ ರೈಫಲ್ಸ್ ಸಿಬ್ಬಂದಿ ಇಂಫಾಲ್‌ನಿಂದ 407 ಟಾಟಾ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ನಂಬೋಲ್ ಪೊಲೀಸ್ ಠಾಣೆ ಪ್ರದೇಶದಲ್ಲಿ ದಾಳಿ ನಡೆದಿದೆ. ದಾಳಿಗೊಳಗಾದ ಸ್ಥಳ ಇಂಫಾಲ್ ವಿಮಾನ ನಿಲ್ದಾಣದಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿದೆ. ಇಂಫಾಲ್‌ನಿಂದ ಬಿಷ್ಣುಪುರ ಜಿಲ್ಲೆಯ ಕಡೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ” ಎಂದು ಪಿಟಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Fri, 19 September 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ