5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು […]

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ
ಸಾಧು ಶ್ರೀನಾಥ್​

Updated on: Feb 01, 2020 | 12:52 PM

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ:
ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ಅಹಮದಾಬಾದ್‌ನಲ್ಲಿ ಸಿಂಧೂ ನಾಗರಿಕತೆ ಸಾರುವ ಮ್ಯೂಸಿಯಂ ಸ್ಥಾಪನೆ ಮತ್ತು ಜಾರ್ಖಂಡ್‌ನಲ್ಲಿ ಆದಿವಾಸಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುತ್ತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Published On - 12:41 pm, Sat, 1 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us