ಸಮಾಧಾನ‘ಕರ’ವಾಯಿತೇ ಆದಾಯ ತೆರಿಗೆ!?

ದೆಹಲಿ: 2020-21ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಾರಿ ತೆರಿಗೆ ಪಾವತಿದಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಈ ಬಾರಿ ವೈಯಕ್ತಿಕ ಆದಾಯ ತೆರಿಗೆ ಲೆಕ್ಕಾಚಾರದಲ್ಲಿ..  2.5 ಲಕ್ಷ ರೂ. ಒಳಗಿರುವ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ 2.5 ಲಕ್ಷದಿಂದ 5 ಲಕ್ಷ ರೂ. ಒಳಗಿನ ಆದಾಯಕ್ಕೆ ಶೇ. 5ರಷ್ಟು ತೆರಿಗೆ ಪಾವತಿಸಬೇಕು 5 ಲಕ್ಷದಿಂದ 7.5 ಲಕ್ಷ ರೂ. ಆದಾಯಕ್ಕೆ ಶೇ. 10ರಷ್ಟು ತೆರಿಗೆ 7.5 ಲಕ್ಷದಿಂದ 10 […]

ಸಮಾಧಾನ‘ಕರ’ವಾಯಿತೇ ಆದಾಯ ತೆರಿಗೆ!?
ಸಾಧು ಶ್ರೀನಾಥ್​

Updated on: Feb 01, 2020 | 2:32 PM

ದೆಹಲಿ: 2020-21ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಾರಿ ತೆರಿಗೆ ಪಾವತಿದಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಈ ಬಾರಿ ವೈಯಕ್ತಿಕ ಆದಾಯ ತೆರಿಗೆ ಲೆಕ್ಕಾಚಾರದಲ್ಲಿ.. 
2.5 ಲಕ್ಷ ರೂ. ಒಳಗಿರುವ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ
2.5 ಲಕ್ಷದಿಂದ 5 ಲಕ್ಷ ರೂ. ಒಳಗಿನ ಆದಾಯಕ್ಕೆ ಶೇ. 5ರಷ್ಟು ತೆರಿಗೆ ಪಾವತಿಸಬೇಕು
5 ಲಕ್ಷದಿಂದ 7.5 ಲಕ್ಷ ರೂ. ಆದಾಯಕ್ಕೆ ಶೇ. 10ರಷ್ಟು ತೆರಿಗೆ
7.5 ಲಕ್ಷದಿಂದ 10 ಲಕ್ಷ ರೂ. ಆದಾಯಕ್ಕೆ ಶೇ. 15ರಷ್ಟು ತೆರಿಗೆ
10 ಲಕ್ಷದಿಂದ 12.5 ಲಕ್ಷ ರೂ. ಆದಾಯಕ್ಕೆ ಶೇ. 20ರಷ್ಟು ತೆರಿಗೆ
12.5 ಲಕ್ಷದಿಂದ 15 ಲಕ್ಷ ರೂ. ಆದಾಯಕ್ಕೆ ಶೇ. 25ರಷ್ಟು ತೆರಿಗೆ
15 ಲಕ್ಷ ರೂ. ಮೇಲ್ಪಟ್ಟು ಆದಾಯಕ್ಕೆ ಶೇ.30ರಷ್ಟು ತೆರಿಗೆ ಪಾವತಿಸಬೇಕು.


ವೈಯಕ್ತಿಕವಾಗಿ ವಾರ್ಷಿಕ ಆದಾಯ 5 ಲಕ್ಷ ಮಾತ್ರ ಇದ್ರೆ ತೆರಿಗೆ ವಿನಾಯಿತಿ:
ವೈಯಕ್ತಿಕ ಆದಾಯ ತೆರಿಗೆ ಮಿತಿ ಇಳಿಕೆ ವಿಚಾರಕ್ಕೆ ಸಂಬಂಧಿಸಿ 2.5ಲಕ್ಷದವರೆಗೂ ಯಾವುದೇ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ. 2.5ರಿಂದ 5ಲಕ್ಷದವರೆಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ ಪಾವತಿಸಬೇಕಿದೆ. ಆದ್ರೆ ವೈಯಕ್ತಿಕವಾಗಿ ವಾರ್ಷಿಕ ಆದಾಯ 5ಲಕ್ಷ ಮಾತ್ರ ಇದ್ರೆ ತೆರಿಗೆ ಕಟ್ಟಬೇಕಿಲ್ಲ. ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 87ಎ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ. ವಾರ್ಷಿಕ ಆದಾಯ 5ಲಕ್ಷ ಮಾತ್ರ ಇದ್ರೆ 12,500 ರೂ. ತೆರಿಗೆ ವಿನಾಯಿತಿ ಇದೆ. 5ಲಕ್ಷ ಮಾತ್ರ ಆದಾಯ ಇರುವವರು ತೆರಿಗೆ ವಿನಾಯಿತಿಗೆ ಅರ್ಹರಾಗಿದ್ದಾರೆ. ಆದಾಯ 5ಲಕ್ಷದ 1 ರೂ. ಆದ್ರೂ ತೆರಿಗೆ ವಿನಾಯಿತಿ ಇರುವುದಿಲ್ಲ. 2.5ರಿಂದ 5ಲಕ್ಷದವರೆಗಿನ ಆದಾಯಕ್ಕಿದ್ದ ತೆರಿಗೆ ವಿನಾಯಿತಿ ಸಿಗುವುದಿಲ್ಲ. ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 87ಎ ಅನ್ವಯ ಆಗಲ್ಲ.

ವೈಯಕ್ತಿಕ ಆದಾಯ ತೆರಿಗೆಯಿಂದ ಕೇಂದ್ರ ಸರ್ಕಾರಕ್ಕೆ 40 ಸಾವಿರ ಕೋಟಿ ಆದಾಯವನ್ನು ನಿರೀಕ್ಷೆ ಮಾಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು.

Published On - 1:46 pm, Sat, 1 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us