AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸುಮ್: ಅನ್ನದಾತ ಇನ್ನು ವಿದ್ಯುತ್​ದಾತನೂ ಆಗುತ್ತಾನೆ! ಇದು ನಿರ್ಮಲಾ ಕೊಡುಗೆ

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನ್ನದಾತರಿಗೆ ಬಂಪರ್ ಯೋಜನೆ ಘೋಷಿಸಿದ್ದಾರೆ. ಅನ್ನದಾತರನ್ನು ವಿದ್ಯುತ್ ಉತ್ಪಾದಕರನ್ನಾಗಿ ಮಾಡುತ್ತೇವೆ. ರೈತರಿಗೆ ಕುಸುಮ್ ಯೋಜನೆಯಡಿ ಸೋಲಾರ್‌ ಪಂಪ್‌ ನೀಡುತ್ತೇವೆ. ವಿದ್ಯುತ್ ಉತ್ಪಾದನೆಗಾಗಿ ರೈತರ ಬರಡು ಭೂಮಿ ಬಳಕೆ ಮಾಡಲಾಗುವುದು. ಈ ಸಂಬಂಧ 20 ಲಕ್ಷ ರೈತರಿಗೆ ಸೋಲಾರ್ ಪಂಪ್​ಸೆಟ್​ ವಿತರಿಸಿ ರೈತರ ಪಂಪ್​ಸೆಟ್​ ಅನ್ನು ಸೌರ ವಿದ್ಯುತ್ ಜೊತೆ ಜೋಡನೆ ಮಾಡಲಾಗುವುದು ಎಂದು ಹೇಳಿದರು. ರೈತರ ಆದಾಯ ದ್ವಿಗುಣಕ್ಕೆ ಕ್ರಮ: […]

ಕುಸುಮ್: ಅನ್ನದಾತ ಇನ್ನು ವಿದ್ಯುತ್​ದಾತನೂ ಆಗುತ್ತಾನೆ! ಇದು ನಿರ್ಮಲಾ ಕೊಡುಗೆ
ಸಾಧು ಶ್ರೀನಾಥ್​
|

Updated on:Feb 01, 2020 | 12:05 PM

Share

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನ್ನದಾತರಿಗೆ ಬಂಪರ್ ಯೋಜನೆ ಘೋಷಿಸಿದ್ದಾರೆ. ಅನ್ನದಾತರನ್ನು ವಿದ್ಯುತ್ ಉತ್ಪಾದಕರನ್ನಾಗಿ ಮಾಡುತ್ತೇವೆ. ರೈತರಿಗೆ ಕುಸುಮ್ ಯೋಜನೆಯಡಿ ಸೋಲಾರ್‌ ಪಂಪ್‌ ನೀಡುತ್ತೇವೆ. ವಿದ್ಯುತ್ ಉತ್ಪಾದನೆಗಾಗಿ ರೈತರ ಬರಡು ಭೂಮಿ ಬಳಕೆ ಮಾಡಲಾಗುವುದು. ಈ ಸಂಬಂಧ 20 ಲಕ್ಷ ರೈತರಿಗೆ ಸೋಲಾರ್ ಪಂಪ್​ಸೆಟ್​ ವಿತರಿಸಿ ರೈತರ ಪಂಪ್​ಸೆಟ್​ ಅನ್ನು ಸೌರ ವಿದ್ಯುತ್ ಜೊತೆ ಜೋಡನೆ ಮಾಡಲಾಗುವುದು ಎಂದು ಹೇಳಿದರು.

ರೈತರ ಆದಾಯ ದ್ವಿಗುಣಕ್ಕೆ ಕ್ರಮ: ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆ ಮುಖಾಂತರ ದೇಶದ ರೈತರ ಆದಾಯ ದ್ವಿಗುಣಗೊಳಿಸುವತ್ತ ಸರ್ಕಾರದ ಚಿತ್ತ ಹರಿಸಲಾಗುವುದು. ರೈತರ ಆದಾಯವನ್ನು ಹೆಚ್ಚಿಸಲು ಕೃಷಿ ಸಿಂಚಾಯಿ ಯೋಜನೆ ಜಾರಿ ಮಾಡಲಾಗುವುದು. ಅನ್ನದಾತರಿಗಾಗಿ ಕೃಷಿ ಮಾರುಕಟ್ಟೆ ಉದಾರೀಕರಣಗೊಳಿಸುವ ಅಗತ್ಯವಿದೆ. ಕೃಷಿ ವಲಯಕ್ಕೆ 16 ಅಂಶಗಳ ಯೋಜನೆ ಜಾರಿಗೆ ತರಲಾಗುವುದು. ಫಸಲ್‌ ಭಿಮಾ ಯೋಜನೆಯಿಂದ 6.11 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದರು.

ಪಂಚಾಯತ್ ವ್ಯಾಪ್ತಿಯಲ್ಲಿ ಶೀತಲಗೃಹ ಸ್ಥಾಪನೆ: 100 ಜಿಲ್ಲೆಗಳಲ್ಲಿ ಜಲ ಸಂವರ್ಧನೆಗೆ ಯೋಜನೆ ಜಾರಿಗೆ ತರಲಾಗುವುದು. ಪಶುಪಾಲನೆ, ಮೀನುಗಾರಿಕೆಯತ್ತ ಗಮನಹರಿಸುವ ಅಗತ್ಯವಿದೆ. 162 ಬಿಲಿಯನ್ ಮೆಟ್ರಿಕ್ ಟನ್ ಆಹಾರ ಸಂಸ್ಕರಣೆ ಗುರಿ ಹೊಂದಿದ್ದೇವೆ. ರೈತರಿಗಾಗಿ ಧಾನ್ಯ ಲಕ್ಷ್ಮೀ ಯೋಜನೆ, ಮುದ್ರಾ, ನಬಾರ್ಡ್‌ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು. ಕಿಸಾನ್ ರೈಲು, ಕೃಷಿ ಉಡಾನ್ ಯೋಜನೆ ಜಾರಿ ಗೊಳಿಸುತ್ತೇವೆ. ಹಾಲು, ಮಾಂಸ, ಮೀನು ಸಾಗಾಟಕ್ಕೆ ಕಿಸಾನ್‌ ರೈಲು ಸಹಕಾರಿಯಾಗಲಿದೆ. 313 ಮಿಲಿಯನ್ ಮೆಟ್ರಿಕ್ ಟನ್ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿದ್ದೇವೆ. ಪಂಚಾಯತ್ ವ್ಯಾಪ್ತಿಯಲ್ಲಿ ಶೀತಲಗೃಹ ಸ್ಥಾಪನೆ ಮಾಡಲಾಗುವುದು. ಕೃಷಿ ಸಾಲಕ್ಕಾಗಿ ನಬಾರ್ಡ್‌ಗೆ 15 ಲಕ್ಷ ಕೋಟಿ ರೂಪಾಯಿ ನೀಡಲಾಗುವುದು. ದೇಶಾದ್ಯಂತ 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡಲಾಗುವುದು. 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದೇವೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

Published On - 11:42 am, Sat, 1 February 20

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!