ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ: ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ […]

ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!
ಸಾಧು ಶ್ರೀನಾಥ್​

Updated on: Feb 01, 2020 | 1:56 PM

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ:
ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ ಪಾಲುದಾರಿಕೆ, ಷೇರು ಮಾರುಕಟ್ಟೆಯಲ್ಲಿ ಸರ್ಕಾರದ ಪಾಲುದಾರಿಕೆ ಸಹ ಮಾರಾಟ ಮಾಡಲಾಗುತ್ತೆ. ಅಲ್ಲದೆ, ದೇಶದಲ್ಲಿ 5 ಲಕ್ಷ ಸಣ್ಣ, ಮಧ್ಯಮ ಕೈಗಾರಿಕೆಗಳು ಪುನಶ್ಚೇತನಗೊಂಡಿದೆ. ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Published On - 1:04 pm, Sat, 1 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us